ಸಾಂದರ್ಭಿಕ ಚಿತ್ರ 
ದೇಶ

ಸೆಕ್ಸ್ ವರ್ಕ್ ಸಾರ್ವಜನಿಕವಾಗಿದ್ದರೆ ಮಾತ್ರ ಅಪರಾಧ ಎಂದ ಮುಂಬೈ ಕೋರ್ಟ್; ಬಂಧಿತ ಲೈಂಗಿಕ ಕಾರ್ಯಕರ್ತೆ ಬಿಡುಗಡೆ

ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶವನ್ನು ರದ್ದುಗೊಳಿಸಿದ ಮುಂಬೈ  ಸೆಷನ್ಸ್ ನ್ಯಾಯಾಲಯ, 34 ವರ್ಷದ ಲೈಂಗಿಕ ಕಾರ್ಯಕರ್ತೆಯನ್ನು ಬಿಡುಗಡೆ ಮಾಡುವಂತೆ ಶೆಲ್ಟರ್ ಹೋಮ್‌ಗೆ ನಿರ್ದೇಶಿಸಿದೆ. ಅಲ್ಲದೆ ನಿಯಮದಂತೆ, ಸಾರ್ವಜನಿಕ ಸ್ಥಳದಲ್ಲಿ....

ಮುಂಬೈ: ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶವನ್ನು ರದ್ದುಗೊಳಿಸಿದ ಮುಂಬೈ  ಸೆಷನ್ಸ್ ನ್ಯಾಯಾಲಯ, 34 ವರ್ಷದ ಲೈಂಗಿಕ ಕಾರ್ಯಕರ್ತೆಯನ್ನು ಬಿಡುಗಡೆ ಮಾಡುವಂತೆ ಶೆಲ್ಟರ್ ಹೋಮ್‌ಗೆ ನಿರ್ದೇಶಿಸಿದೆ. ಅಲ್ಲದೆ ನಿಯಮದಂತೆ, ಸಾರ್ವಜನಿಕ ಸ್ಥಳದಲ್ಲಿ ಇತರರಿಗೆ ಕಿರಿಕಿರಿ ಉಂಟುಮಾಡುವಂತೆ ಲೈಂಗಿಕ ಕೆಲಸದಲ್ಲಿ ತೊಡಗಿದ್ದರೆ ಮಾತ್ರ ಅಪರಾಧವಾಗುತ್ತದೆ ಎಂದು ಹೇಳಿದೆ.

ಕಳೆದ ಮಾರ್ಚ್ 15 ರಂದು ಮ್ಯಾಜಿಸ್ಟ್ರೇಟ್ ಕೋರ್ಟ್ ಲೈಂಗಿಕ ಕಾರ್ಯಕರ್ತೆಯೊಬ್ಬರಿಗೆ ಮುಂಬೈನ ಶೆಲ್ಟರ್ ಹೋಮ್‌ನಲ್ಲಿ ಒಂದು ವರ್ಷ ಬಂಧನದಲ್ಲಿರುವಂತೆ ಆದೇಶಿಸಿತ್ತು. ನಂತರ ಮಹಿಳೆ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ಪ್ರಶ್ನಿಸಿ ಸೆಷನ್ಸ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಿ.ವಿ.ಪಾಟೀಲ್ ಅವರು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿದ್ದು, ಅವರ ಆದೇಶದ ವಿವರ ಇತ್ತೀಚೆಗೆ ಲಭ್ಯವಾಗಿದೆ.

ಕಳೆದ ಫೆಬ್ರವರಿಯಲ್ಲಿ ಉಪನಗರ ಮುಲುಂಡ್‌ನಲ್ಲಿರುವ ವೇಶ್ಯಾಗೃಹದ ಮೇಲೆ ದಾಳಿ ನಡೆಸಿದ ನಂತರ ಈ ಮಹಿಳೆಯನ್ನು ಬಂಧಿಸಲಾಗಿತ್ತು. ನಂತರ, ಮಹಿಳೆ ವಿರುದ್ಧ ಎಫ್‌ಐಆರ್ ದಾಖಲಿಸಿ, ಆಕೆಯೊಂದಿಗೆ ಇತರ ಇಬ್ಬರನ್ನು ಮಜಗಾಂವ್‌ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಮಹಿಳೆ ತಾನು ಯಾವುದೇ ಅನೈತಿಕ ಚಟುವಟಿಕೆಗಳಲ್ಲಿ ಭಾಗವಹಿಸಿಲ್ಲ ಎಂದು ಸೆಷನ್ಸ್ ನ್ಯಾಯಾಲಯದಲ್ಲಿ ವಾದಿಸಿದ್ದಾರೆ.

"ನಿಯಮದ ಪ್ರಕಾರ, ಸ್ವತಃ ಲೈಂಗಿಕ ಕೆಲಸದಲ್ಲಿ ತೊಡಗಿಸಿಕೊಳ್ಳುವುದು ಅಪರಾಧವಲ್ಲ. ಆದರೆ ಇತರರಿಗೆ ಕಿರಿಕಿರಿ ಉಂಟುಮಾಡುವ ರೀತಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಲೈಂಗಿಕ ಕಾರ್ಯದಲ್ಲಿ ತೊಡಗಿದ್ದರೆ ಮಾತ್ರ ಅಪರಾಧ ಎಂದು ಕರೆಯಬಹುದು" ಎಂದು ಸೆಷನ್ಸ್ ನ್ಯಾಯಾಲಯ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT