ಪ್ರಧಾನಿ ಮೋದಿ 
ದೇಶ

ಆಸ್ಟ್ರೇಲಿಯಾದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮ: ಮೆಲ್ಬೋರ್ನ್ ನಿಂದ ಸಿಡ್ನಿಗೆ ಆಗಮಿಸಿದ ಎನ್ಆರ್ ಐಗಳು

ಪ್ರಧಾನಿ ನರೇಂದ್ರ ಮೋದಿ ಅವರ ಈ ಬಾರಿಯ ವಿದೇಶ ಪ್ರವಾಸ ಅತಿ ಹೆಚ್ಚು ಸುದ್ದಿಯಾಗುತ್ತಿದ್ದು, ಆಸ್ಟ್ರೇಲಿಯಾದಲ್ಲಿ ಪ್ರಧಾನಿ ಮೋದಿ ಅವರ ಕಾರ್ಯಕ್ರಮದಲ್ಲಿ ಭಾಗಿಯಾಗಲು ಎನ್ಆರ್ ಐಗಳು ಅತ್ಯಂತ ಉತ್ಸುಕರಾಗಿದ್ದಾರೆ. 

ಸಿಡ್ನಿ: ಪ್ರಧಾನಿ ನರೇಂದ್ರ ಮೋದಿ ಅವರ ಈ ಬಾರಿಯ ವಿದೇಶ ಪ್ರವಾಸ ಅತಿ ಹೆಚ್ಚು ಸುದ್ದಿಯಾಗುತ್ತಿದ್ದು, ಆಸ್ಟ್ರೇಲಿಯಾದಲ್ಲಿ ಪ್ರಧಾನಿ ಮೋದಿ ಅವರ ಕಾರ್ಯಕ್ರಮದಲ್ಲಿ ಭಾಗಿಯಾಗಲು ಎನ್ಆರ್ ಐಗಳು ಅತ್ಯಂತ ಉತ್ಸುಕರಾಗಿದ್ದಾರೆ. 

ಮೆಲ್ಬೋರ್ನ್ ನಿಂದ ಸಿಡ್ನಿಗೆ 170 ಅನಿವಾಸಿ ಭಾರತೀಯರು ಚಾರ್ಟೆಡ್ ವಿಮಾನದ ಮೂಲಕ ಆಗಮಿಸಿದ್ದಾರೆ.
 
ಭಾರತೀಯ ಆಸ್ಟ್ರೇಲಿಯನ್ ಡಯಾಸ್ಪೊರಾ ಫೌಂಡೇಶನ್ (ಐಎಡಿಎಫ್) ನ ಸದಸ್ಯರು, ತ್ರಿವರ್ಣ-ಥೀಮ್ ಹೊಂದಿರುವ ಪೇಟಗಳನ್ನು ಧರಿಸಿ, ರಾಷ್ಟ್ರಧ್ವಜಗಳನ್ನು ಬೀಸುತ್ತಾ, "ಮೋದಿ ಏರ್ವೇಸ್" ಎಂದು ಹೆಸರಿಸಿದ ವಿಮಾನದಲ್ಲಿ ಸಿಡ್ನಿಗೆ ಆಗಮಿಸಿದ್ದಾರೆ. 

ಆಸ್ಟ್ರೇಲಿಯಾದ ಕ್ರಿಯಾತ್ಮಕ ಮತ್ತು ವೈವಿಧ್ಯಮಯ ಭಾರತೀಯ ಸಮುದಾಯದ ಸಂಭ್ರಮಾಚರಣೆಯ ಭಾಗವಾಗಿ IADF ನಿಂದ ಸಿಡ್ನಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ, ಇದು "ನಮ್ಮ ಬಹುಸಂಸ್ಕೃತಿಯ ಸಮುದಾಯದ ಪ್ರಮುಖ ಭಾಗ" ಎಂದು ಆಸ್ಟ್ರೇಲಿಯಾ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.

ಐಎಡಿಎಫ್‌ನ ಸಹ-ಸಂಸ್ಥಾಪಕ ಡಾ ಅಮಿತ್ ಸರ್ವಾಲ್, " ಕಾರ್ಯಕ್ರಮ ನಡೆಯುವ ಸ್ಥಳದ ಹೊರಗೂ ಬಹಳಷ್ಟು ಜನರು ಕಾಯುತ್ತಿದ್ದಾರೆ, ಅಲ್ಲಿ ಅವರು ಪ್ರಧಾನಿ ಮೋದಿಗಾಗಿ ಕಾಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಪಪುವಾ ನ್ಯೂ ಗಿನಿಯಾದಿಂದ ಆಸ್ಟ್ರೇಲಿಯಾಗೆ ಆಗಮಿಸಿರುವ ಪ್ರಧಾನಿ ಮೋದಿ, ನಾಳೆ ಆಸ್ಟ್ರೇಲಿಯಾ ಪ್ರಧಾನಿ ಆಂಟೋನಿ ಅಲ್ಬನೀಸ್ ಅವರನ್ನು ಭೇಟಿ ಮಾಡಲಿದ್ದಾರೆ.

ಪಪುವಾ ನ್ಯೂ ಗಿನಿಯಾದಲ್ಲಿ ಉಭಯ ನಾಯಕರೂ ಪ್ರಾದೇಶಿಕ ಸಹಕಾರವನ್ನು ಉತ್ತೇಜಿಸುವ ಭಾರತ-ಪೆಸಿಫಿಕ್ ದ್ವೀಪಗಳ ಸಹಕಾರದ ವೇದಿಕೆ (ಎಫ್‌ಐಪಿಐಸಿ) ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಪ್ರಧಾನಿ ಮೋದಿ ಶುಕ್ರವಾರ ಜಪಾನ್‌ನಿಂದ ಮೂರು ರಾಷ್ಟ್ರಗಳ ಪ್ರವಾಸವನ್ನು ಪ್ರಾರಂಭಿಸಿದರು, ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ಜಿ 7 ಶೃಂಗಸಭೆಯಲ್ಲಿ ಮೂರು ಅಧಿವೇಶನಗಳಲ್ಲಿ ಭಾಗವಹಿಸಿದ್ದರು.

ಹಿರೋಷಿಮಾದಲ್ಲಿ ನಡೆದ 3ನೇ ಕ್ವಾಡ್ ಶೃಂಗಸಭೆಯಲ್ಲಿ US ಅಧ್ಯಕ್ಷ ಜೋ ಬಿಡೆನ್, ಜಪಾನಿನ ಪ್ರಧಾನಿ ಕಿಶಿಡಾ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರೊಂದಿಗೆ ಪ್ರಧಾನಿ ಮೋದಿ ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT