ಸೆಂಟ್ರಲ್ ದೆಹಲಿಯಲ್ಲಿರುವ ನೂತನ ಸಂಸತ್ ಭವನ 
ದೇಶ

ರಾಷ್ಟ್ರಪತಿಗೆ ಅವಮಾನ: ಟಿಎಂಸಿ ನಂತರ ಹೊಸ ಸಂಸತ್ ಭವನದ ಉದ್ಘಾಟನೆ ಬಹಿಷ್ಕರಿಸಲು ಎಎಪಿ ನಿರ್ಧಾರ

ನೂತನ ಸಂತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದಿರುವುದು ಅವರಿಗೆ ಮಾಡಿದ ಅವಮಾನ ಎಂದಿರುವ ಆಮ್ ಆದ್ಮಿ ಪಕ್ಷ (ಎಎಪಿ) ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳುವ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ಮಂಗಳವಾರ ಘೋಷಿಸಿದೆ.

ನವೆದೆಹಲಿ: ನೂತನ ಸಂತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದಿರುವುದು ಅವರಿಗೆ ಮಾಡಿದ ಅವಮಾನ ಎಂದಿರುವ ಆಮ್ ಆದ್ಮಿ ಪಕ್ಷ (ಎಎಪಿ) ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳುವ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ಮಂಗಳವಾರ ಘೋಷಿಸಿದೆ.

ಎಎಪಿ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಟ್ವೀಟ್‌ ಮಾಡಿದ್ದು, 'ನೂತನ ಸಂಸತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದಿರುವುದು ಅವರಿಗೆ ಮಾಡಿದ ಘೋರ ಅವಮಾನ. ಇದು ದಲಿತ, ಬುಡಕಟ್ಟು ಮತ್ತು ಸಮಾಜದ ಮೂಲ ವರ್ಗಕ್ಕೆ ಮಾಡಿದ ಅವಮಾನ. (ಪ್ರಧಾನಿ) ಮೋದಿ ಅವರು ರಾಷ್ಟ್ರಪತಿಗಳನ್ನು ಆಹ್ವಾನಿಸದಿರುವುದನ್ನು ಪ್ರತಿಭಟಿಸಿ ಉದ್ಘಾಟನಾ ಕಾರ್ಯಕ್ರಮವನ್ನು ಬಹಿಷ್ಕರಿಸಲಿದೆ' ಎಂದಿದ್ದಾರೆ.

ಇದಕ್ಕೂ ಮುನ್ನ ತೃಣಮೂಲ ಕಾಂಗ್ರೆಸ್ ನೂತನ ಸಂಸತ್ ಭವನದ ಉದ್ಘಾಟನೆಯನ್ನು ಬಹಿಷ್ಕರಿಸುವುದಾಗಿ ಘೋಷಿಸಿತ್ತು.

ತೃಣಮೂಲ ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯ ಡೆರೆಕ್ ಒ ಬ್ರಿಯಾನ್ ಟ್ವೀಟ್‌ ಮಾಡಿದ್ದು, 'ಸಂಸತ್ತು ಕೇವಲ ಹೊಸ ಕಟ್ಟಡವಲ್ಲ; ಇದು ಹಳೆಯ ಸಂಪ್ರದಾಯಗಳು, ಮೌಲ್ಯಗಳು, ಪೂರ್ವನಿದರ್ಶನಗಳು ಮತ್ತು ನಿಯಮಗಳೊಂದಿಗೆ ಸ್ಥಾಪನೆಯಾಗಿದೆ. ಸಂಸತ್ ಭವನವು ಭಾರತೀಯ ಪ್ರಜಾಪ್ರಭುತ್ವದ ಅಡಿಪಾಯವಾಗಿದೆ. ಪ್ರಧಾನಿ ಮೋದಿಗೆ ಅದು ಅರ್ಥವಾಗುವುದಿಲ್ಲ. ಭಾನುವಾರದ ಹೊಸ ಕಟ್ಟಡದ ಉದ್ಘಾಟನೆ ಎಂಬುದು ಅವರಿಗೆ ನಾನು, ನನ್ನದು ಮತ್ತು ನನಗಾಗಿ ಎನ್ನುವುದಷ್ಟೇ. ಆದ್ದರಿಂದ ನಾವು ಕಾರ್ಯಕ್ರಮದಿಂದ ಹೊರಗುಳಿಯುತ್ತೇವೆ' ಎಂದಿದ್ದಾರೆ.

ನೂತನ ಸಂಸತ್ ಭವನದ ಉದ್ಘಾಟನೆಯ ದಿನಾಂಕದ ಆಯ್ಕೆ ಬಗ್ಗೆ ತೃಣಮೂಲ ಈಗಾಗಲೇ ಆಕ್ಷೇಪ ವ್ಯಕ್ತಪಡಿಸಿದೆ. ಅವರ ಪ್ರಕಾರ, ಹೊಸ ಸಂಸತ್ ಕಟ್ಟಡದ ಉದ್ಘಾಟನೆಯ ಸಂದರ್ಭವು ಆರ್‌ಎಸ್‌ಎಸ್ ನಾಯಕ ವಿಡಿ ಸಾವರ್ಕರ್ ಅವರ ಜನ್ಮದಿನವಾದ ಮೇ 28ರ ಬದಲಿಗೆ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭವಾಗಿರಬೇಕು ಎಂದಿದೆ.

ಹೊಸ ಕಟ್ಟಡ ಉದ್ಘಾಟನೆಗೆ ಕಾಂಗ್ರೆಸ್ ಕೂಡ ಬಹಿಷ್ಕಾರ ಹಾಕುವ ಸಾಧ್ಯತೆ ಇದೆ. ಬುಧವಾರ ಅಥವಾ ಗುರುವಾರ ಈ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT