ನರೇಂದ್ರ ಮೋದಿ ಮತ್ತು ದೇವೇಗೌಡ 
ದೇಶ

ಹೊಸ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ 7 ವಿರೋಧ ಪಕ್ಷಗಳು ಭಾಗಿ; 19 ವಿಪಕ್ಷಗಳಿಂದ ಬಹಿಷ್ಕಾರ

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಹೊಸ ಸಂಸತ್ ಭವನ ಉದ್ಘಾಟಿಸಲಿದ್ದು, ಈ ಕಾರ್ಯಕ್ರಮದಲ್ಲಿ ಏಳು ಪ್ರತಿಪಕ್ಷಗಳು ಭಾಗವಹಿಸಿದರೆ, 19 ಪ್ರತಿಪಕ್ಷಗಳು ಕಾರ್ಯಕ್ರಮವನ್ನು ಬಹಿಷ್ಕರಿಸಲು ನಿರ್ಧರಿಸಿವೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಹೊಸ ಸಂಸತ್ ಭವನ ಉದ್ಘಾಟಿಸಲಿದ್ದು, ಈ ಕಾರ್ಯಕ್ರಮದಲ್ಲಿ ಏಳು ಪ್ರತಿಪಕ್ಷಗಳು ಭಾಗವಹಿಸಿದರೆ, 19 ಪ್ರತಿಪಕ್ಷಗಳು ಕಾರ್ಯಕ್ರಮವನ್ನು ಬಹಿಷ್ಕರಿಸಲು ನಿರ್ಧರಿಸಿವೆ.

ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಏಳು ಪ್ರತಿಪಕ್ಷಗಳು ಸೇರಿದಂತೆ 25 ರಾಜಕೀಯ ಪಕ್ಷಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಭಾರತೀಯ ಜನತಾ ಪಾರ್ಟಿ ಸೇರಿದಂತೆ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್‌ಡಿಎ)ದ 18 ಮಿತ್ರ ಪಕ್ಷಗಳ ಹೊರತಾಗಿ, ಏಳು ಎನ್ ಡಿಎಯೇತರ ಪಕ್ಷಗಳು ಸಮಾರಂಭದಲ್ಲಿ ಪಾಲ್ಗೊಳ್ಳಲಿವೆ.

ಬಹುಜನ ಸಮಾಜ ಪಕ್ಷ, ಶಿರೋಮಣಿ ಅಕಾಲಿದಳ, ಜನತಾ ದಳ(ಜಾತ್ಯತೀತ), ಲೋಕ ಜನಶಕ್ತಿ ಪಕ್ಷ- ರಾಮ್ ವಿಲಾಸ್, ಯುವಜನ ಶ್ರಮಿಕ ರೈತ ಕಾಂಗ್ರೆಸ್, ಬಿಜು ಜನತಾ ದಳ ಮತ್ತು ತೆಲುಗು ದೇಶಂ ಪಕ್ಷ ಸೇರಿದಂತೆ ಏಳು ಎನ್‌ಡಿಎಯೇತರ ಪಕ್ಷಗಳು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿವೆ.

ಲೋಕಸಭೆಯಲ್ಲಿ ಒಟ್ಟು 50 ಸಂಸದರನ್ನು ಹೊಂದಿರುವ ಈ ಏಳು ಪಕ್ಷಗಳ ಉಪಸ್ಥಿತಿಯು ಬಿಜೆಪಿ ನೇತೃತ್ವದ ಎನ್‌ಡಿಎಗೆ ದೊಡ್ಡ ರಿಲೀಫ್ ನೀಡಿದೆ.

ನೂತನ ಸಂಸತ್ ಭವನ ದೇಶದ ಆಸ್ತಿ ಮತ್ತು ತೆರಿಗೆದಾರರ ಹಣದಿಂದ ಅದನ್ನು ನಿರ್ಮಿಸಿದ ಕಾರಣ ತಾವು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಗುರುವಾರ ಹೇಳಿದ್ದಾರೆ.

ಕಾಂಗ್ರೆಸ್, ಎಡಪಕ್ಷ, ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ಆಮ್ ಆದ್ಮಿ ಪಕ್ಷ ಸೇರಿದಂತೆ ಹತ್ತೊಂಬತ್ತು ಪ್ರತಿಪಕ್ಷಗಳು ಒಟ್ಟಾಗಿ ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕರಿಸುವುದಾಗಿ ಘೋಷಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT