ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ 
ದೇಶ

ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಕಸರತ್ತು: ದೆಹಲಿಯಲ್ಲಿ ಕಾಂಗ್ರೆಸ್ ವಾರ್ ರೂಂನಲ್ಲಿ ಸಿಎಂ ಸಿದ್ದರಾಮಯ್ಯ ಸಭೆ

ರಾಜ್ಯ ಸಚಿವ ಸಂಪುಟ ರಚನೆ ಕುರಿತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರೊಂದಿಗೆ ಸಭೆ ನಡೆಸಿದ ನಂತರ ಸಿಎಂ ಸಿದ್ದರಾಮಯ್ಯ ಅವರು 15 ಜಿಆರ್‌ಜಿಗೆ ವಾರ್ ರೂಂನಿಂದ ಹೊರಟರು.

ನವದೆಹಲಿ: ಕಾಂಗ್ರೆಸ್ ಹೈಕಮಾಂಡ್ ಮುಂದೆ ರಾಜ್ಯ ನಾಯಕರ ಸಚಿವ ಸಂಪುಟ ರಚನೆ ಕಸರತ್ತು ಮುಂದುವರಿದಿದೆ. ರಾಜ್ಯ ಸಚಿವ ಸಂಪುಟ ರಚನೆ ಕುರಿತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರೊಂದಿಗೆ ಸಭೆ ನಡೆಸಿದ ನಂತರ ಸಿಎಂ ಸಿದ್ದರಾಮಯ್ಯ ಅವರು 15 ಜಿಆರ್‌ಜಿಗೆ ವಾರ್ ರೂಂನಿಂದ ಹೊರಟರು.

ದೆಹಲಿಯ ಜಿಆರ್​ಜಿ ರಸ್ತೆಯಲ್ಲಿರುವ ಕಾಂಗ್ರೆಸ್ ವಾರ್ ರೂಮ್​ನಲ್ಲಿ ಬೆಳಗ್ಗೆ 11.30ರಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆ ಸಭೆ ನಡೆಸಿದರು. ಸದ್ಯ ಸಿದ್ದರಾಮಯ್ಯ ಅವರು ಭೋಜನ ವಿರಾಮಕ್ಕಾಗಿ ಹೊರಬಂದಿದ್ದಾರೆ. ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಲಾಗುತ್ತಿದೆ.

224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ 10 ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 135 ಸ್ಥಾನಗಳನ್ನು ಗೆದ್ದುಕೊಂಡಿದೆ. ಚುನಾವಣೆಯಲ್ಲಿ ಪಕ್ಷವನ್ನು ಬಲವಾಗಿ ಬೆಂಬಲಿಸಿದ ಸಮುದಾಯಗಳ ಆಧಾರದ ಮೇಲೆ ಸಚಿವರ ನಿರ್ಧಾರಗಳನ್ನು ತೆಗೆದುಕೊಳ್ಳಬೇಕೆಂದು ಕೆಲವು ಹಿರಿಯ ಕಾಂಗ್ರೆಸ್ ನಾಯಕರು ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. 

ಒಕ್ಕಲಿಗ ಸಮುದಾಯಕ್ಕೆ ಸೇರಿದ ಡಿ ಕೆ ಶಿವಕುಮಾರ್ ಅವರನ್ನು ಮಾತ್ರ ಡಿಸಿಎಂ ಮಾಡಿರುವುದು ಪಕ್ಷದಲ್ಲಿ ಅನೇಕ ಹಿರಿಯ ಶಾಸಕರಿಗೆ ಅಸಮಾಧಾನ ತಂದಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

SCROLL FOR NEXT