ನೂತನ ಸಂಸತ್ ಭವನದಲ್ಲಿ ಪ್ರಧಾನಿ ಮೋದಿ ಚಿತ್ರ 
ದೇಶ

ನೂತನ ಸಂಸತ್ ಭವನ: ಉದ್ಘಾಟನೆಯಲ್ಲಿ ಭಾಗಿಯಾಗಿ 'ಹೃದಯ ವೈಶಾಲ್ಯತೆ' ತೋರಿ: ಪ್ರತಿಪಕ್ಷಗಳಿಗೆ ಬಿಜೆಪಿ ಮನವಿ

ಪ್ರಧಾನಿ ನರೇಂದ್ರ ಮೋದಿ ಅವರ ಒತ್ತಾಸೆಯಂತೆ ನೂತನ ಸಂಸತ್ ಭವನ ನಿರ್ಮಿಸಲಾಗಿದೆ ಎಂಬ ಕಾರಣಕ್ಕೆ ವಿರೋಧ ಪಕ್ಷಗಳು ಅದರ ಉದ್ಘಾಟನೆಯನ್ನು ಬಹಿಷ್ಕರಿಸಲು ನಿರ್ಧರಿಸಿವೆ ಎಂದು ಬಿಜೆಪಿ ಗುರುವಾರ ಆರೋಪಿಸಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಒತ್ತಾಸೆಯಂತೆ ನೂತನ ಸಂಸತ್ ಭವನ ನಿರ್ಮಿಸಲಾಗಿದೆ ಎಂಬ ಕಾರಣಕ್ಕೆ ವಿರೋಧ ಪಕ್ಷಗಳು ಅದರ ಉದ್ಘಾಟನೆಯನ್ನು ಬಹಿಷ್ಕರಿಸಲು ನಿರ್ಧರಿಸಿವೆ ಎಂದು ಬಿಜೆಪಿ ಗುರುವಾರ ಆರೋಪಿಸಿದೆ.

ಹೊಸ ಕಟ್ಟಡ ಭಾರತದ ಹೆಮ್ಮೆಯ ಸಂಕೇತವಾಗಿದೆ ಎಂದು ಹೇಳಿರುವ ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಮೇ 28 ರಂದು  'ಐತಿಹಾಸಿಕ ಉದ್ಘಾಟನೆಯ ದಿನದಂದು ಪ್ರತಿಪಕ್ಷಗಳು ಹೃದಯ ವೈಶಾಲ್ಯತೆ ತೋರಿಸುವ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು. 

"ನಾವೆಲ್ಲರೂ ರಾಷ್ಟ್ರಪತಿಗಳನ್ನು ಗೌರವಿಸುತ್ತೇವೆ, ಅವರ ಬಗ್ಗೆ ಕಾಂಗ್ರೆಸ್ ಹೇಳಿದ್ದನ್ನು ನೆನಪಿಸಿಕೊಳ್ಳುವ ಮೂಲಕ ರಾಷ್ಟ್ರಪತಿ ಹುದ್ದೆಯನ್ನು ಯಾವುದೇ ವಿವಾದಕ್ಕೆ ಎಳೆಯಲು ಬಯಸುವುದಿಲ್ಲ. ಆದರೆ ಭಾರತದ ಪ್ರಧಾನಿ ಕೂಡ ಸಂಸತ್ತಿನ ಪ್ರಮುಖ ಭಾಗವಾಗಿದ್ದಾರೆ. ಪ್ರಧಾನಿ ಕೂಡ ಸಾಂವಿಧಾನಿಕ ಜವಾಬ್ದಾರಿಯನ್ನು ಹೊಂದಿದ್ದಾರೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಕಾರ್ಯಕ್ರಮ ಬಹಿಷ್ಕಾರವನ್ನು ಪ್ರತಿಪಕ್ಷಗಳ ಒಗ್ಗಟ್ಟಿನ ವೇದಿಕೆಯಾಗಿ ಬಳಸಬೇಡಿ ಎಂದು ವಿಪಕ್ಷ ನಾಯಕರನ್ನು ಒತ್ತಾಯಿಸಿದ ಪ್ರಸಾದ್, ಹಾಗೆ ಮಾಡಲು ಅವರಿಗೆ ಹೆಚ್ಚಿನ ಅವಕಾಶಗಳಿವೆ ಎಂದರು. 

"ಮೊಘಲರು ಲಾಲ್ ಕ್ವಿಲಾ, ಜಮಾ ಮಸೀದಿ ಮತ್ತು ಹುಮಾಯೂನ್ ಸಮಾಧಿಯನ್ನು ನಿರ್ಮಿಸಿದರು. ಕುತಾಬ್-ಉದ್-ದೀನ್ ಐಬಕ್ ಕುತಾಬ್ ಮಿನಾರ್ ಅನ್ನು ನಿರ್ಮಿಸಿದರು. ರಾಷ್ಟ್ರಪತಿ ಭವನ ಮತ್ತು ಸಂಸತ್ ಭವನ ಎಂದು ಕರೆಯಲ್ಪಡುವ ನಾರ್ತ್ ಬ್ಲಾಕ್, ಸೌತ್ ಬ್ಲಾಕ್, ವೈಸರಾಯ್ ಹೌಸ್ ನ್ನು ಬ್ರಿಟಿಷರು ನಿರ್ಮಿಸಿದರು . ನಾವು 75ವರ್ಷಗಳಲ್ಲಿ ಏನನ್ನು ನಿರ್ಮಿಸಿದ್ದೇವೆ ಎಂದು ಕೇಳಿದ ರವಿಶಂಕರ್ ಪ್ರಸಾದ್,  'ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರ ಭಾರತಕ್ಕೆ ಭಾರತೀಯರೇ ಏಕೆ ಸಂಸತ್ತನ್ನು ನಿರ್ಮಿಸಬಾರದು' ಎಂದರು. 

ಹೊಸ ಸಂಸತ್ ಕಟ್ಟಡ ಭಾರತೀಯ ವಾಸ್ತುಶಿಲ್ಪದ 'ಅನುಕರಣೀಯ ಮಾದರಿ' ಮತ್ತು ಇದನ್ನು ಭಾರತೀಯ 'ಸಂಸ್ಕಾರದ ಪ್ರಕಾರ ನಿರ್ಮಿಸಲಾಗಿದೆ. ಕಾರ್ಯಕ್ರಮಕ್ಕೆ ಬಂದು ಪಾಲ್ಗೊಳ್ಳಿ ಎಂದು ಕಾಂಗ್ರೆಸ್ ನಾಯಕರು ಮತ್ತು ಇತರ ವಿರೋಧ ಪಕ್ಷದ ನಾಯಕರಿಗೆ ಹೇಳುತ್ತೇನೆ. ಸಂಸತ್ ದೇಶದ ಪ್ರಜಾಪ್ರಭುತ್ವದ ಕಿರೀಟವಾಗಿದೆ ಎಂದು ಅವರು ಹೇಳಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT