ಕಮಲ್ ಹಾಸನ್ 
ದೇಶ

ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕಾರ ನಿರ್ಧಾರ ಮರುಪರಿಶೀಲಿಸಿ: ವಿಪಕ್ಷಗಳಿಗೆ ಕಮಲ ಹಾಸನ್ ಸಲಹೆ 

ರಾಜಕೀಯ ಭಿನ್ನಾಭಿಪ್ರಾಯಗಳನ್ನು ಒಂದು ದಿನದ ಮಟ್ಟಿಗೆ ಬದಿಗಿಡಬಹುದು ಎಂದು ಹೇಳಿರುವ ಕಮಲ್ ಹಾಸನ್, ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕಾರ ನಿರ್ಧಾರವನ್ನು ಮರುಪರಿಶೀಲಿಸುವಂತೆ ಹೇಳಿದ್ದಾರೆ.

ಚೆನ್ನೈ: ರಾಜಕೀಯ ಭಿನ್ನಾಭಿಪ್ರಾಯಗಳನ್ನು ಒಂದು ದಿನದ ಮಟ್ಟಿಗೆ ಬದಿಗಿಡಬಹುದು ಎಂದು ಹೇಳಿರುವ ಕಮಲ್ ಹಾಸನ್, ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕಾರ ನಿರ್ಧಾರವನ್ನು ಮರುಪರಿಶೀಲಿಸುವಂತೆ ಹೇಳಿದ್ದಾರೆ.

ಬಹಿಷ್ಕಾರ ನಿರ್ಧಾರ ಮರುಪರಿಶೀಲಿಸಿ, ಹೊಸ ಸಂಸತ್ ಉದ್ಘಾಟನೆಯಲ್ಲಿ ಭಾಗವಹಿಸುವ ಮೂಲಕ ರಾಷ್ಟ್ರೀಯ ಒಗ್ಗಟ್ಟಿನ ಕಾರ್ಯಕ್ರಮವನ್ನಾಗಿ ಮಾಡಿ ಎಂದು ಕಮಲ ಹಾಸನ್ ಮನವಿ ಮಾಡಿದ್ದಾರೆ. 

ಭಾರತದ ಹೊಸ ಮನೆಯಲ್ಲಿ ಅದರ ಎಲ್ಲಾ ಕುಟುಂಬ ಸದಸ್ಯರು ಇರುವ ಅಗತ್ಯವಿದೆ, ನಾನು ಎಲ್ಲರನ್ನೂ ಒಳಗೊಳ್ಳುವ, ಭಾಗಿಯಾಗುವ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಹೊಂದಿರುವುದಾಗಿ ಕಮಲ್ ಹಾಸನ್ ಹೇಳಿದ್ದು, ಕಾರ್ಯಕ್ರಮವನ್ನು ಬಹಿಷ್ಕರಿಸಲು ಆಯ್ಕೆ ಮಾಡಿಕೊಂಡಿರುವ ಎಲ್ಲಾ ವಿರೋಧ ಪಕ್ಷಗಳು ಅದನ್ನು ಮರುಪರಿಶೀಲಿಸುವಂತೆ ಕರೆ ನೀಡಿದ್ದಾರೆ. 

ಇಡೀ ದೇಶವೇ ಸಂಸತ್ ಉದ್ಘಾಟನೆ ಕಾರ್ಯಕ್ರಮವನ್ನು ಎದುರುನೋಡುತ್ತಿದೆ. ನಮ್ಮಲ್ಲಿ ಒಡಕು ಉಂಟುಮಾಡುವುದಕ್ಕಿಂತ ಒಗ್ಗೂಡಿಸುವ ಅನೇಕ ಅಂಶಗಳಿವೆ ಎಂದು ಕಮಲ ಹಾಸನ್ ಅಭಿಪ್ರಾಯಪಟ್ಟಿದ್ದಾರೆ. 

ಪ್ರಪಂಚದ ಕಣ್ಣುಗಳು ನಮ್ಮ ಮೇಲಿವೆ. ಹೊಸ ಸಂಸತ್ತಿನ ಉದ್ಘಾಟನೆಯನ್ನು ರಾಷ್ಟ್ರೀಯ ಏಕತೆಯ ಸಂದರ್ಭವನ್ನಾಗಿ ಮಾಡೋಣ, ನಮ್ಮ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಒಂದು ದಿನ ಬದಿಗೆ ಇಡಬಹುದು, ”ಎಂದು ಮಕ್ಕಳ್ ನೀಧಿ ಮೈಯಂ ಅಧ್ಯಕ್ಷ ಹಾಸನ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT