ಕಮಲ್ ಹಾಸನ್ 
ದೇಶ

ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕಾರ ನಿರ್ಧಾರ ಮರುಪರಿಶೀಲಿಸಿ: ವಿಪಕ್ಷಗಳಿಗೆ ಕಮಲ ಹಾಸನ್ ಸಲಹೆ 

ರಾಜಕೀಯ ಭಿನ್ನಾಭಿಪ್ರಾಯಗಳನ್ನು ಒಂದು ದಿನದ ಮಟ್ಟಿಗೆ ಬದಿಗಿಡಬಹುದು ಎಂದು ಹೇಳಿರುವ ಕಮಲ್ ಹಾಸನ್, ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕಾರ ನಿರ್ಧಾರವನ್ನು ಮರುಪರಿಶೀಲಿಸುವಂತೆ ಹೇಳಿದ್ದಾರೆ.

ಚೆನ್ನೈ: ರಾಜಕೀಯ ಭಿನ್ನಾಭಿಪ್ರಾಯಗಳನ್ನು ಒಂದು ದಿನದ ಮಟ್ಟಿಗೆ ಬದಿಗಿಡಬಹುದು ಎಂದು ಹೇಳಿರುವ ಕಮಲ್ ಹಾಸನ್, ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕಾರ ನಿರ್ಧಾರವನ್ನು ಮರುಪರಿಶೀಲಿಸುವಂತೆ ಹೇಳಿದ್ದಾರೆ.

ಬಹಿಷ್ಕಾರ ನಿರ್ಧಾರ ಮರುಪರಿಶೀಲಿಸಿ, ಹೊಸ ಸಂಸತ್ ಉದ್ಘಾಟನೆಯಲ್ಲಿ ಭಾಗವಹಿಸುವ ಮೂಲಕ ರಾಷ್ಟ್ರೀಯ ಒಗ್ಗಟ್ಟಿನ ಕಾರ್ಯಕ್ರಮವನ್ನಾಗಿ ಮಾಡಿ ಎಂದು ಕಮಲ ಹಾಸನ್ ಮನವಿ ಮಾಡಿದ್ದಾರೆ. 

ಭಾರತದ ಹೊಸ ಮನೆಯಲ್ಲಿ ಅದರ ಎಲ್ಲಾ ಕುಟುಂಬ ಸದಸ್ಯರು ಇರುವ ಅಗತ್ಯವಿದೆ, ನಾನು ಎಲ್ಲರನ್ನೂ ಒಳಗೊಳ್ಳುವ, ಭಾಗಿಯಾಗುವ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಹೊಂದಿರುವುದಾಗಿ ಕಮಲ್ ಹಾಸನ್ ಹೇಳಿದ್ದು, ಕಾರ್ಯಕ್ರಮವನ್ನು ಬಹಿಷ್ಕರಿಸಲು ಆಯ್ಕೆ ಮಾಡಿಕೊಂಡಿರುವ ಎಲ್ಲಾ ವಿರೋಧ ಪಕ್ಷಗಳು ಅದನ್ನು ಮರುಪರಿಶೀಲಿಸುವಂತೆ ಕರೆ ನೀಡಿದ್ದಾರೆ. 

ಇಡೀ ದೇಶವೇ ಸಂಸತ್ ಉದ್ಘಾಟನೆ ಕಾರ್ಯಕ್ರಮವನ್ನು ಎದುರುನೋಡುತ್ತಿದೆ. ನಮ್ಮಲ್ಲಿ ಒಡಕು ಉಂಟುಮಾಡುವುದಕ್ಕಿಂತ ಒಗ್ಗೂಡಿಸುವ ಅನೇಕ ಅಂಶಗಳಿವೆ ಎಂದು ಕಮಲ ಹಾಸನ್ ಅಭಿಪ್ರಾಯಪಟ್ಟಿದ್ದಾರೆ. 

ಪ್ರಪಂಚದ ಕಣ್ಣುಗಳು ನಮ್ಮ ಮೇಲಿವೆ. ಹೊಸ ಸಂಸತ್ತಿನ ಉದ್ಘಾಟನೆಯನ್ನು ರಾಷ್ಟ್ರೀಯ ಏಕತೆಯ ಸಂದರ್ಭವನ್ನಾಗಿ ಮಾಡೋಣ, ನಮ್ಮ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಒಂದು ದಿನ ಬದಿಗೆ ಇಡಬಹುದು, ”ಎಂದು ಮಕ್ಕಳ್ ನೀಧಿ ಮೈಯಂ ಅಧ್ಯಕ್ಷ ಹಾಸನ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT