ಸೆಂಟ್ರಲ್ ದೆಹಲಿಯಲ್ಲಿರುವ ನೂತನ ಸಂಸತ್ ಭವನ 
ದೇಶ

ಕರ್ನಾಟಕದ ಪುರೋಹಿತರಿಂದ ನಾಳೆ ಸಂಸತ್ ಭವನ ಉದ್ಘಾಟನೆ ವಿಧಿವಿಧಾನ

ನಾಳೆ ನೂತನ ಸಂಸತ್ ಭವನದ ಉದ್ಘಾಟನೆಯಾಗಲಿದ್ದು, ಉದ್ಘಾಟನೆಗೂ ಮುನ್ನ ಇಂದು ಸಂಜೆಯಿಂದ ಸಂಸತ್ ಭವನದಲ್ಲಿ ಕೆಲವು ಧಾರ್ಮಿಕ ವಿಧಿವಿಧಾನಗಳಿಗೆ ಚಾಲನೆ ನೀಡಲಾಗಿದೆ.

ನವದೆಹಲಿ: ನಾಳೆ ನೂತನ ಸಂಸತ್ ಭವನದ ಉದ್ಘಾಟನೆಯಾಗಲಿದ್ದು, ಉದ್ಘಾಟನೆಗೂ ಮುನ್ನ ಇಂದು ಸಂಜೆಯಿಂದ ಸಂಸತ್ ಭವನದಲ್ಲಿ ಕೆಲವು ಧಾರ್ಮಿಕ ವಿಧಿವಿಧಾನಗಳಿಗೆ ಚಾಲನೆ ನೀಡಲಾಗಿದೆ.

ಶೃಂಗೇರಿಯ ಶಾರದಾ ಪೀಠದಿಂದ ಪುರೋಹಿತರು, ವಿದ್ವಾಂಸರ ನೇತೃತ್ವದಲ್ಲಿ ಸಂಸತ್ ಭವನ ಉದ್ಘಾಟನೆಯ ಧಾರ್ಮಿಕ ವಿಧಿವಿಧಾನಗಳು ನಡೆಯುತ್ತಿದೆ. ಶೃಂಗೇರಿ ಮಠದ ವಿದ್ವಾಂಸರಾದ ಸೀತಾರಾಮ ಶರ್ಮ, ರಾಮ ಶರ್ಮ,ಲಕ್ಷ್ಮೀಶ ತಂತ್ರಿ ಅವರು ಕಾರ್ಯಕ್ರಮದ ನೇತೃತ್ವ ವಹಿಸಿದ್ದಾರೆ.

ಈ ಹಿಂದೆ ಸಂಸತ್ ಭವನದ ಮೇಲೆ ಲಾಂಛನ ಲೋಕಾರ್ಪಣೆ, ನೂತನ ಸಂಸತ್ ಭವನದ ಶಂಕುಸ್ಥಾಪನೆ ಕಾರ್ಯಕ್ರಮಗಳ ಧಾರ್ಮಿಕ ವಿಧಿವಿಧಾನಗಳೂ ಕರ್ನಾಟಕದ ಶೃಂಗೇರಿಯ ಪುರೋಹಿತರು, ವಿದ್ವಾಂಸರ ನೇತೃತ್ವದಲ್ಲಿ ನಡೆದಿತ್ತು.

ಇನ್ನು ರಾಜದಂಡ (ಸೆಂಗೋಲ್) ನ್ನು ಅಧೀನಂ ಸಾಧು-ಸಂತರ ತಂಡ ಪ್ರಧಾನಿಗೆ ಇಂದು ಹಸ್ತಾಂತರಿಸಿದ್ದು, ಅದನ್ನು ನಾಳೆ ಸಂಸತ್ ನಲ್ಲಿ ಪ್ರತಿಷ್ಠಾಪಿಸಲಾಗುತ್ತದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT