ಎನ್ಐಎ 
ದೇಶ

ಭಯೋತ್ಪಾದನೆಗೆ ಆರ್ಥಿಕ ನೆರವು ಪ್ರಕರಣ: ಮಧ್ಯ ಪ್ರದೇಶದ ಜಬಲ್‌ಪುರದ 13 ಸ್ಥಳಗಳಲ್ಲಿ ಎನ್‌ಐಎ ದಾಳಿ

ಭಯೋತ್ಪಾದನೆ ಸಂಚು, ಉಗ್ರದಾಳಿಗೆ ಆರ್ಥಿಕ ನೆರವು ಲಭ್ಯವಾಗುತ್ತಿದ್ದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶನಿವಾರ ಮಧ್ಯ ಪ್ರದೇಶದ ಜಬಲ್‌ಪುರದ 13 ಸ್ಥಳಗಳಲ್ಲಿ ದಾಳಿ ನಡೆಸಿದೆ.

ಭೋಪಾಲ್: ಭಯೋತ್ಪಾದನೆ ಸಂಚು, ಉಗ್ರದಾಳಿಗೆ ಆರ್ಥಿಕ ನೆರವು ಲಭ್ಯವಾಗುತ್ತಿದ್ದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶನಿವಾರ ಮಧ್ಯ ಪ್ರದೇಶದ ಜಬಲ್‌ಪುರದ 13 ಸ್ಥಳಗಳಲ್ಲಿ ದಾಳಿ ನಡೆಸಿದೆ.

ಬಾಂಗ್ಲಾದೇಶದ ಜಮಾತ್-ಉಲ್-ಮುಜಾಹಿದ್ದೀನ್ ಗೆ ಭೋಪಾಲ್ ನಲ್ಲಿ ಆರ್ಥಿಕ ನೆರವು ಸಿಗುತ್ತಿದ್ದಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ಪ್ರಕರಣದಲ್ಲಿ ಶಾಮೀಲಾಗಿರುವವರ ಶಂಕಿತರ ಸ್ಥಳಗಳಲ್ಲಿ ಶೋಧಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 
ಮಧ್ಯಪ್ರದೇಶದ ಪೊಲೀಸರ ಸಹಕಾರದೊಂದಿಗೆ ಎನ್ಐಎ ಈ ದಾಳಿ ನಡೆಸಿದೆ. ಮೇ.25 ರಂದು ಎನ್ಐಎ ಭೋಪಾಲ್ ನಲ್ಲಿ 2 ಸ್ಥಳಗಳಲ್ಲಿ ದಾಳಿ ನಡೆಸಿ, ಉಗ್ರರಿಗೆ ಸಿಗುತ್ತಿರುವ ಆರ್ಥಿಕ ನೆರವಿನ ಪ್ರಕರಣದಲ್ಲಿ ಶೋಧಕಾರ್ಯಾಚರಣೆ ನಡೆಸಿತ್ತು.

ಈಗಾಗಲೇ ಬಂಧಿತರಾಗಿರುವ 10 ಆರೋಪಿಗಳು ಮತ್ತು ಚಾರ್ಜ್‌ಶೀಟ್ ನಲ್ಲಿ ಹೆಸರು ಉಲ್ಲೇಖಗೊಂಡಿರುವವರ ಮತ್ತಷ್ಟು ಸಂಪರ್ಕಗಳು ಮತ್ತು ಪಿತೂರಿಗಳನ್ನು ಬಹಿರಂಗಪಡಿಸಲು ಈ ದಾಳಿಗಳು ನಡೆದಿವೆ. ಬಂಧನಕ್ಕೊಳಗಾಗಿರುವ 10 ಮಂದಿ ಪೈಕಿ 6 ಮಂದಿ ಬಾಂಗ್ಲಾದೇಶಿ ಪ್ರಜೆಗಳಾಗಿದ್ದು, ಜೆಎಂಬಿ ಸಂಘಟನೆಯ ಸಕ್ರಿಯ ಸದಸ್ಯರಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT