ಕಾರ್ಮಿಕರ ಸನ್ಮಾನಿಸುತ್ತಿರುವ ಪ್ರಧಾನಿ ಮೋದಿ. 
ದೇಶ

ನೂತನ ಸಂಸತ್ ಭವನ ಲೋಕಾರ್ಪಣೆ: ಕಟ್ಟಡ ನಿರ್ಮಾಣಕ್ಕೆ ಶ್ರಮಿಸಿದ ಕಾರ್ಮಿಕರ ಸನ್ಮಾನಿಸಿದ ಪ್ರಧಾನಿ ಮೋದಿ

ನೂತನ ಸಂಸತ್ ಭವನ ಕಟ್ಟಡ ನಿರ್ಮಾಣಕ್ಕಾಗಿ ಶ್ರಮಿಸಿದ ಕಾರ್ಮಿಕರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಸನ್ಮಾನ ಮಾಡಿದರು.

ನವದೆಹಲಿ: ನೂತನ ಸಂಸತ್ ಭವನ ಕಟ್ಟಡ ನಿರ್ಮಾಣಕ್ಕಾಗಿ ಶ್ರಮಿಸಿದ ಕಾರ್ಮಿಕರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಸನ್ಮಾನ ಮಾಡಿದರು.

ಸಾಂಪ್ರದಾಯಿಕ ಶಾಲು ಹೊದಿಸಿ, ಸ್ಮರಣಿಕೆ ನೀಡುವ ಮೂಲಕ ಕಾರ್ಮಿಕರಿಗೆ ಪ್ರಧಾನಿ ಮೋದಿಯವರು ಗೌರವ ಸಲ್ಲಿಸಿದರು.

ಇದಕ್ಕೂ ಮುನ್ನ, ಮೋದಿ ಅವರು ಪುರೋಹಿತರಿಂದ ಪಡೆದ ಐತಿಹಾಸಿಕ ಸೆಂಗೋಲ್ ನ್ನು ಲೋಕಸಭೆಯ ಸಭಾಂಗಣದಲ್ಲಿ ಸ್ಪೀಕರ್ ಕುರ್ಚಿಯ ಪಕ್ಕದಲ್ಲಿ ಪ್ರತಿಷ್ಠಾಪನೆ ಮಾಡಿದರು.

ಆಗಸ್ಟ್ 14, 1947 ರಂದು ಬ್ರಿಟಿಷ್ ಗುಲಾಮಗಿರಿ ಆಳ್ವಿಕೆಯಿಂದ ಮುಕ್ತಿ ಪಡೆದ ಭಾರತಕ್ಕೆ ಅಧಿಕಾರವನ್ನು ಹಸ್ತಾಂತರಿಸುವ ಸೂಚಕವಾಗಿ ಸಂಗೋಲ್'ನ್ನು ಭಾರತೀಯಕರಿಗೆ ಬ್ರಿಟೀಷರು ನೀಡಿದ್ದರು.

ಸ್ವತಂತ್ರ ಭಾರತದ ಮೊದಲ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರು ಅವರು ಬ್ರಿಟೀಷರಿಂದ ಈ ಸೆಂಗೋಲ್'ನ್ನು ಪಡೆದಿದ್ದರು.

ಸೆಂಗೋಲ್ ಆಡಳಿತಗಾರನು ಕಾನೂನಿನ ಅಡಿಯಲ್ಲಿರುತ್ತಾನೆ ಎಂಬುದರ ಸಂಕೇತವಾಗಿದೆ. ಜಗತ್ತನ್ನು ಸಂಕೇತಿಸುವ ಸೆಂಗೋಲ್‌ನ ಮಂಡಲವು ಶಿವನ ಪವಿತ್ರ ಗೂಳಿಯಾದ ನಂದಿಯ ಕೆತ್ತನೆಯಿಂದ ಒಳಗೊಂಡಿದೆ. ಚಿನ್ನದ ರಾಜದಂಡದ ಮೂಲವು ಚೋಳ ಸಾಮ್ರಾಜ್ಯದಲ್ಲಿ ಅದರ ಮೂಲವನ್ನು ಹೊಂದಿದೆ. ಒಬ್ಬ ರಾಜನಿಂದ ಮತ್ತೊಬ್ಬ ರಾಜನಿಗೆ ಅಧಿಕಾರದ ವರ್ಗಾವಣೆಯು ನ್ಯಾಯದ ಸಂಕೇತವಾದ ನಂದಿಯ ಕೆತ್ತನೆಯನ್ನು ಹೊಂದಿರುವ ಚಿನ್ನದ ಕೋಲು ಸೆಂಗೋಲ್ ನ್ನು ಹಸ್ತಾಂತರಿಸುವ ಮೂಲಕ ಗುರುತಿಸಲ್ಪಟ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT