ದೇಶ

ನೂತನ ಸಂಸತ್ ಭವನ ಉದ್ಘಾಟನೆ: ರಾಷ್ಟ್ರಗೀತೆ ಮೂಲಕ 2ನೇ ಹಂತದ ಕಾರ್ಯಕ್ರಮ ಆರಂಭ, ಗಣ್ಯಾತಿಗಣ್ಯರು ಭಾಗಿ

Manjula VN

ನವದೆಹಲಿ: ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರುತ್ತಿದ್ದು, 2ನೇ ಹಂತದ ಕಾರ್ಯಕ್ರಮ ರಾಷ್ಟ್ರಗೀತೆ ಮೂಲಕ ಆರಂಭಗೊಂಡಿದೆ.

ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಣ್ಯರನ್ನು ರಾಜ್ಯಸಭಾ ಉಪಸಭಾಪತಿ ಹರಿವಂಶ ಸ್ವಾಗತಿಸಿದರು. ಈ ವೇಳೆ ಮಾತನಾಡಿದ ಅವರು, ನಮ್ಮ ಅತಿದೊಡ್ಡ ಪ್ರಜಾಪ್ರಭುತ್ವದ ದೇಗುಲವಾದ ನೂತನ ಸಂಸತ್​ ಅನ್ನು ಲೋಕಾರ್ಪಣೆಗೊಂಡಿದ್ದು, ಸಂತಸದ ಸಂಗತಿಯಾಗಿದೆ ಎಂದು ಹೇಳಿದರು.

ಪ್ರಧಾನಿ ಮೋದಿಯವರು ಕಡಿಮೆ ಸಮಯದಲ್ಲಿ ಭವಿಷ್ಯದ ದೃಷ್ಟಿಯಿಂದ ಸುಂದರವಾದ ಸಂಸತ್​​ ಅನ್ನು ನಿರ್ಮಿಸಿದ್ದಾರೆ. ಬಹಳ ಸುಂದರವಾದ ಭವನವಾಗಿದೆ. ಈ ಹಿಂದಿನ ಸಂಸತ ಭವನಕ್ಕಿಂತ ದೊಡ್ಡದಾಗಿದೆ. ಡಿಜಿಟಲ್​ ಸೌಲಭ್ಯ ಹೊಂದಿದೆ. ಆಜಾದಿ ಕಾ ಅಮೃತ ಕಾಲದಲ್ಲಿ ಈ ಸಂಸತ್​ ಭವನ ನಿರ್ಮಾಣ ಜಪ್ರತಿನಿಧಿಗಳಿಗೆ ಪ್ರೇರಣಾದಾಯಕವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಲೋಕಸಭೆಯ ಸ್ಪೀಕರ್​ ಓಂ ಬಿರ್ಲಾ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್​ ಸಿಂಗ್​, ಪ್ರಲ್ಹಾದ್​​ ಜೋಶಿ ಮತ್ತು ಮಾಜಿ ಪ್ರಧಾನಿ ಹೆಚ್​​.ಡಿ.ದೇವೇಗೌಡ, ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್​ ರೆಡ್ಡಿ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​  ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ.

SCROLL FOR NEXT