ಕುಸ್ತಿಪಟುಗಳಿಂದ ಪ್ರತಿಭಟನೆ 
ದೇಶ

ಕುಸ್ತಿಪಟುಗಳ ಬೆಂಬಲಿಸಿ 'ಮಹಾ ಪಂಚಾಯತ್'ಗೆ ಹೋಗದಂತೆ 'ತಡೆಯಲಾಗಿದೆ': ಜೆಎನ್‌ಯು ವಿದ್ಯಾರ್ಥಿಗಳು

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಭದ್ರತೆಯನ್ನು ಹೆಚ್ಚಿಸುವ ಮೂಲಕ 'ಮಹಿಳಾ ಮಹಾ ಪಂಚಾಯತಿ'ಯಲ್ಲಿ ಪಾಲ್ಗೊಳ್ಳದಂತೆ ವಿವಿ ಅಧಿಕಾರಿಗಳು ತಮ್ಮನ್ನು "ತಡೆದಿದ್ದಾರೆ" ಎಂದು ಭಾನುವಾರ ಜೆಎನ್ ಯು ವಿದ್ಯಾರ್ಥಿಗಳು...

ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಭದ್ರತೆಯನ್ನು ಹೆಚ್ಚಿಸುವ ಮೂಲಕ 'ಮಹಿಳಾ ಮಹಾ ಪಂಚಾಯತಿ'ಯಲ್ಲಿ ಪಾಲ್ಗೊಳ್ಳದಂತೆ ವಿವಿ ಅಧಿಕಾರಿಗಳು ತಮ್ಮನ್ನು "ತಡೆದಿದ್ದಾರೆ" ಎಂದು ಭಾನುವಾರ ಜೆಎನ್ ಯು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಲು 'ಮಹಾ ಪಂಚಾಯತ್' ಕರೆಯಲಾಗಿದೆ.

ಕ್ಯಾಂಪಸ್‌ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಆದರೆ ಈ ಬಗ್ಗೆ ಪೊಲೀಸರು ಅಥವಾ ವಿಶ್ವವಿದ್ಯಾಲಯದಿಂದ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ.

ಕ್ಯಾಂಪಸ್‌ನಲ್ಲಿ "ಅಘೋಷಿತ ಸೆಕ್ಷನ್ 144" ಅನ್ನು ಜಾರಿಗೊಳಿಸಲಾಗಿದೆ ಎಂದು ಅಖಿಲ ಭಾರತ ವಿದ್ಯಾರ್ಥಿಗಳ ಸಂಘ(ಎಐಎಸ್‌ಎ) ಹೇಳಿಕೊಂಡಿದೆ.

"ಇಂದು, ಮಹಿಳಾ ಪಂಚಾಯತ್ ಆಯೋಜಿಸಲಾಗಿದೆ. ಆದರೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಒಳಗೆ ಮತ್ತು ಹೊರಗೆ ಭಾರೀ ಪೊಲೀಸ್ ನಿಯೋಜನೆ ಮಾಡಲಾಗಿದೆ. ಈ ಮೂಲಕ ಸರ್ಕಾರ ಮಹಿಳಾ ಮಹಾ ಪಂಚಾಯತ್ ನಲ್ಲಿ ವಿದ್ಯಾರ್ಥಿಗಳು ಭಾಗವಹಿಸದಂತೆ ತಡೆಯಲಾಗಿದೆ. ಲೈಂಗಿಕ ದೌರ್ಜನ್ಯ ಆರೋಪಿಗಳನ್ನು ಸರ್ಕಾರ ರಕ್ಷಿಸುತ್ತಿದೆ" ಎಂದು ಎಐಎಸ್ಎ ಕಾರ್ಯಕರ್ತೆ ಮಧುರಿಮಾ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT