ಮಹಾಕಾಲ ಲೋಕ್ ಕಾರಿಡಾರ್ ನಲ್ಲಿ ವಿಗ್ರಹಗಳಿಗೆ ಹಾನಿ 
ದೇಶ

ಮಹಾಕಾಲ ಲೋಕ್ ಕಾರಿಡಾರ್ ನಲ್ಲಿ ವಿಗ್ರಹಗಳಿಗೆ ಹಾನಿ: ತನಿಖೆಗೆ ಆದೇಶ

ಬಿರುಗಾಳಿಗೆ ಉಜ್ಜೈನ್ ನಲ್ಲಿನ ಮಹಾಕಾಲ್ ಲೋಕ್ ಕಾರಿಡಾರ್ ನಲ್ಲಿರುವ ಕೆಲವು ವಿಗ್ರಹಗಳು ಹಾನಿಗೊಳಗಾಗಿರುವುದರ ಬಗ್ಗೆ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ತನಿಖೆಗೆ ಆದೇಶಿಸಿದ್ದಾರೆ. 

ಭೋಪಾಲ್: ಬಿರುಗಾಳಿಗೆ ಉಜ್ಜೈನ್ ನಲ್ಲಿನ ಮಹಾಕಾಲ್ ಲೋಕ್ ಕಾರಿಡಾರ್ ನಲ್ಲಿರುವ ಕೆಲವು ವಿಗ್ರಹಗಳು ಹಾನಿಗೊಳಗಾಗಿರುವುದರ ಬಗ್ಗೆ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ತನಿಖೆಗೆ ಆದೇಶಿಸಿದ್ದಾರೆ. 

ಸಂಜೆ 4 ಗಂಟೆ ವೇಳೆಗೆ ಬೀಸಿದ ಬಿರುಗಾಳಿಗೆ ಮಹಾಕಾಲೇಶ್ವರ್ ದೇವಾಲಯದ ಆವರಣದಲ್ಲಿ ಸಪ್ತರ್ಷಿಗಳ ವಿಗ್ರಹಗಳ ಪೈಕಿ 6 ವಿಗ್ರಹಗಳು ಧರೆಗೆ ಉರುಳಿವೆ. 

ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಒಂಬತ್ತು ವರ್ಷಗಳನ್ನು ಆಚರಿಸುವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಚೌಹಾಣ್ ಸುದ್ದಿಗಾರರೊಂದಿಗೆ ಮಾತನಾಡಿ, "ನಾನು ಈ ವಿಗ್ರಹಗಳಿಗೆ ಹಾನಿಯುಂಟಾದ ವಿಷಯದ ಬಗ್ಗೆ ಮಾಹಿತಿ ಪಡೆದಿದ್ದೇನೆ ಮತ್ತು ವರದಿಯನ್ನು ಕೇಳಿದ್ದೇನೆ" ಎಂದು ಹೇಳಿದರು.

ಹಾನಿಗೊಳಗಾದ ವಿಗ್ರಹಗಳು ಫೈಬರ್‌ನಿಂದ ಮಾಡಲ್ಪಟ್ಟಿದೆ, ಅಂತಹ ಸ್ಥಳಗಳಲ್ಲಿ ಭಾರವಾದ ಕಲ್ಲಿನ ಆಕೃತಿಗಳನ್ನು ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಹೇಳಿದ್ದಾರೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಹಾಕಾಲ್ ಲೋಕ ಕಾರಿಡಾರ್ ಯೋಜನೆಯ ಮೊದಲ ಹಂತವನ್ನು ಉದ್ಘಾಟಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT