ಹೊಸ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ 
ದೇಶ

ಹೊಸ ಸಂಸತ್ ಭವನ ಉದ್ಘಾಟನೆ ಒಂದು ಧಾರ್ಮಿಕ ಕಾರ್ಯಕ್ರಮವಾಗಿತ್ತು: ಕೇರಳ ಸಿಎಂ ಪಿಣರಾಯಿ

ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ಹೊಸ ಸಂಸತ್ ಭವನ ಉದ್ಘಾಟನಾ ಸಮಾರಂಭ ದೇಶದಲ್ಲಿ "ಪ್ರಜಾಪ್ರಭುತ್ವದ ಮೇಲೆ...

ತಿರುವನಂತಪುರಂ: ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ಹೊಸ ಸಂಸತ್ ಭವನ ಉದ್ಘಾಟನಾ ಸಮಾರಂಭ ದೇಶದಲ್ಲಿ "ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ದಾಳಿಗೆ" ಮತ್ತೊಂದು ಉದಾಹರಣೆಯಾಗಿದೆ ಎಂದು ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇರಳ ಸಿಎಂ, ಇಂದು ಉದ್ದೇಶಪೂರ್ವಕವಾಗಿ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡುವ ಯತ್ನಗಳು ನಡೆಯುತ್ತಿದ್ದು, ಸಂಸತ್ತಿನ ಉದ್ಘಾಟನಾ ಸಮಾರಂಭವೇ ಇದಕ್ಕೆ ಅತ್ಯುತ್ತಮ ಉದಾಹರಣೆಯಾಗಿದೆ ಎಂದರು.

ನಮ್ಮ ದೇಶದಲ್ಲಿ ಜಾತ್ಯತೀತತೆ ಮೇಲೆ ದಾಳಿ ನಡೆಯುತ್ತಿದೆ. ಭಾರತ ಜಾತ್ಯತೀತ ರಾಷ್ಟ್ರ ಎಂಬುದನ್ನು ಒಪ್ಪಲು ಆರ್‌ಎಸ್‌ಎಸ್ ಸಿದ್ಧವಿಲ್ಲ. ಆದ್ದರಿಂದ ಅವರು ಭಾರತವನ್ನು ಧಾರ್ಮಿಕ ದೇಶವಾಗಿ ಬದಲಾಯಿಸಲು ಬಯಸುತ್ತಾರೆ. ಸಂಸತ್ತಿನಲ್ಲಿ ಧಾರ್ಮಿಕ ಸಮಾರಂಭ ನಡೆಯಬಾರದು ಎಂದು ಕೇರಳ ಸಿಎಂ ವಿಜಯನ್ ಹೇಳಿದ್ದಾರೆ.

ಪ್ರಜಾಸತ್ತಾತ್ಮಕ ಸರ್ಕಾರದಲ್ಲಿ ಸಂಸತ್ತಿನಲ್ಲಿ ನಿರ್ದಿಷ್ಟ ಧರ್ಮದ ಧಾರ್ಮಿಕ ಕಾರ್ಯಕ್ರಮ ನಡೆಯಬಾರದು. ಇದು ಜಾತ್ಯತೀತ ರಾಷ್ಟ್ರಕ್ಕೆ ಹೊಂದಿಕೆಯಾಗುವುದಿಲ್ಲ. ದೇಶ ಸಂದಿಗ್ಧ ಕಾಲವನ್ನು ಎದುರಿಸುತ್ತಿದೆ ಎಂದು ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್; ನದಿ ಪಾತ್ರದಲ್ಲಿ ಕಟ್ಟೆಚ್ಚರ