ಹೊಸ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ 
ದೇಶ

ಹೊಸ ಸಂಸತ್ ಭವನ ಉದ್ಘಾಟನೆ ಒಂದು ಧಾರ್ಮಿಕ ಕಾರ್ಯಕ್ರಮವಾಗಿತ್ತು: ಕೇರಳ ಸಿಎಂ ಪಿಣರಾಯಿ

ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ಹೊಸ ಸಂಸತ್ ಭವನ ಉದ್ಘಾಟನಾ ಸಮಾರಂಭ ದೇಶದಲ್ಲಿ "ಪ್ರಜಾಪ್ರಭುತ್ವದ ಮೇಲೆ...

ತಿರುವನಂತಪುರಂ: ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ಹೊಸ ಸಂಸತ್ ಭವನ ಉದ್ಘಾಟನಾ ಸಮಾರಂಭ ದೇಶದಲ್ಲಿ "ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ದಾಳಿಗೆ" ಮತ್ತೊಂದು ಉದಾಹರಣೆಯಾಗಿದೆ ಎಂದು ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇರಳ ಸಿಎಂ, ಇಂದು ಉದ್ದೇಶಪೂರ್ವಕವಾಗಿ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡುವ ಯತ್ನಗಳು ನಡೆಯುತ್ತಿದ್ದು, ಸಂಸತ್ತಿನ ಉದ್ಘಾಟನಾ ಸಮಾರಂಭವೇ ಇದಕ್ಕೆ ಅತ್ಯುತ್ತಮ ಉದಾಹರಣೆಯಾಗಿದೆ ಎಂದರು.

ನಮ್ಮ ದೇಶದಲ್ಲಿ ಜಾತ್ಯತೀತತೆ ಮೇಲೆ ದಾಳಿ ನಡೆಯುತ್ತಿದೆ. ಭಾರತ ಜಾತ್ಯತೀತ ರಾಷ್ಟ್ರ ಎಂಬುದನ್ನು ಒಪ್ಪಲು ಆರ್‌ಎಸ್‌ಎಸ್ ಸಿದ್ಧವಿಲ್ಲ. ಆದ್ದರಿಂದ ಅವರು ಭಾರತವನ್ನು ಧಾರ್ಮಿಕ ದೇಶವಾಗಿ ಬದಲಾಯಿಸಲು ಬಯಸುತ್ತಾರೆ. ಸಂಸತ್ತಿನಲ್ಲಿ ಧಾರ್ಮಿಕ ಸಮಾರಂಭ ನಡೆಯಬಾರದು ಎಂದು ಕೇರಳ ಸಿಎಂ ವಿಜಯನ್ ಹೇಳಿದ್ದಾರೆ.

ಪ್ರಜಾಸತ್ತಾತ್ಮಕ ಸರ್ಕಾರದಲ್ಲಿ ಸಂಸತ್ತಿನಲ್ಲಿ ನಿರ್ದಿಷ್ಟ ಧರ್ಮದ ಧಾರ್ಮಿಕ ಕಾರ್ಯಕ್ರಮ ನಡೆಯಬಾರದು. ಇದು ಜಾತ್ಯತೀತ ರಾಷ್ಟ್ರಕ್ಕೆ ಹೊಂದಿಕೆಯಾಗುವುದಿಲ್ಲ. ದೇಶ ಸಂದಿಗ್ಧ ಕಾಲವನ್ನು ಎದುರಿಸುತ್ತಿದೆ ಎಂದು ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT