ಕಂದರಕ್ಕೆ ಬಿದ್ದ ಬಸ್ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಸೇತುವೆ ಮೇಲಿಂದ ಕಂದರಕ್ಕೆ ಬಿದ್ದ ಬಸ್, 10 ಪ್ರಯಾಣಿಕರು ದುರ್ಮರಣ

ಸೇತುವೆ ಮೇಲಿಂದ ಆಳವಾದ ಕಂದರಕ್ಕೆ ಖಾಸಗಿ ಬಸ್  ಬಿದ್ದ ಪರಿಣಾಮ 10 ಪ್ರಯಾಣಿಕರು ದುರ್ಮರಣ ಹೊಂದಿರುವ ಘಟನೆ ಕೇಂದ್ರಾಡಳಿತ ಪ್ರದೇಶ ಜಮ್ಮುವಿನ ಬಳಿ ಇಂದು ಮುಂಜಾನೆ ನಡೆದಿದೆ.

ಜಮ್ಮು: ಸೇತುವೆ ಮೇಲಿಂದ ಆಳವಾದ ಕಂದರಕ್ಕೆ ಖಾಸಗಿ ಬಸ್  ಬಿದ್ದ ಪರಿಣಾಮ 10 ಪ್ರಯಾಣಿಕರು ದುರ್ಮರಣ ಹೊಂದಿರುವ ಘಟನೆ ಕೇಂದ್ರಾಡಳಿತ ಪ್ರದೇಶ ಜಮ್ಮುವಿನ ಬಳಿ ಇಂದು ಮುಂಜಾನೆ ನಡೆದಿದೆ.

ಅಮೃತಸರದಿಂದ ಕತ್ರಾಕ್ಕೆ ತೆರಳುತ್ತಿದ್ದ ಬಸ್ ಆಳವಾದ ಕಂದರಕ್ಕೆ ಬಿದ್ದು, ಈ ದುರಂತ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಜಮ್ಮು ಜಿಲ್ಲಾಧಿಕಾರಿ ತಿಳಿಸಿದ್ದಾರೆ. 

ಬಸ್ ಅಮೃತಸರದಿಂದ ಕತ್ರಾದಲ್ಲಿರುವ ವೈಷ್ಣೋದೇವಿ ದೇಗುಲಕ್ಕೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ. ಕತ್ರಾದಿಂದ ಸುಮಾರು 15 ಕಿಮೀ ದೂರದಲ್ಲಿರುವ ಜಜ್ಜರ್ ಕೋಟ್ಲಿ ಬಳಿ ಆಳವಾದ ಕಂದರಕ್ಕೆ ಬಸ್ ಉರುಳಿ ಬಿದ್ದಿರುವುದಾಗಿ ಜಮ್ಮು ಡೆಪ್ಯುಟಿ ಕಮಿಷನರ್ ಅವ್ನಿ ಲವಾಸಾ ಎಎನ್‌ಐಗೆ ತಿಳಿಸಿದ್ದಾರೆ.

ಘಟನೆಯಲ್ಲಿ 10 ಮಂದಿ ಸಾವನ್ನಪ್ಪಿದ್ದು, 55 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಎಲ್ಲರನ್ನೂ ತೆರವುಗೊಳಿಸಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆ ಬಹುತೇಕ ಮುಗಿದಿದೆ. ಬಸ್‌ನಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಪ್ರಯಾಣಿಕರು ಪ್ರಯಾಣಿಸುತ್ತಿದುದ್ದೇ ಅಪಘಾತಕ್ಕೆ ಕಾರಣವಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಜಮ್ಮು ಎಸ್ ಎಸ್ ಪಿ ಚಂದನ್‌ ಕೊಹ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT