ಸಾಂದರ್ಭಿಕ ಚಿತ್ರ 
ದೇಶ

ಯುಪಿಯಲ್ಲಿ ಬಿಡಾಡಿ ಗೂಳಿ ದಾಳಿಗೆ ಯೋಧ ಬಲಿ, ಕುಟುಂಬ ಚಿಂತಾಜನಕ

ಉತ್ತರ ಪ್ರದೇಶದ ಅಮ್ರೋಹ ಜಿಲ್ಲೆಯ ಬವನ್‌ಖೇಡಿ ಗ್ರಾಮದ ಹಸನ್‌ಪುರ ಅತ್ರಾಸಿ ರಸ್ತೆಯಲ್ಲಿ ಬಿಡಾಡಿ ಗೂಳಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸೇನಾ ಯೋಧರೊಬ್ಬರು ಸಾವನ್ನಪ್ಪಿದ್ದು, ಅವರ ಪತ್ನಿ ಮತ್ತು ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಸೋಮವಾರ ಈ ಘಟನೆ ನಡೆದಿದೆ. 

ಪಿಲಿಭಿತ್: ಉತ್ತರ ಪ್ರದೇಶದ ಅಮ್ರೋಹ ಜಿಲ್ಲೆಯ ಬವನ್‌ಖೇಡಿ ಗ್ರಾಮದ ಹಸನ್‌ಪುರ ಅತ್ರಾಸಿ ರಸ್ತೆಯಲ್ಲಿ ಬಿಡಾಡಿ ಗೂಳಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸೇನಾ ಯೋಧರೊಬ್ಬರು ಸಾವನ್ನಪ್ಪಿದ್ದು, ಅವರ ಪತ್ನಿ ಮತ್ತು ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಸೋಮವಾರ ಈ ಘಟನೆ ನಡೆದಿದೆ. 

ಮೃತ ಯೋಧ ಅಂಕಿತ್ ಕುಮಾರ್ (28) ಪಂಜಾಬ್‌ನ ಫಿರೋಜ್‌ಪುರದ 507 ಎಎಸ್‌ಸಿ ಬೆಟಾಲಿಯನ್‌ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟಿದ್ದರು. ಮಂಗಳವಾರ ನಿಗದಿಯಾಗಿದ್ದ ಸ್ನೇಹಿತರೊಬ್ಬರ ಮದುವೆಯಲ್ಲಿ ಪಾಲ್ಗೊಳ್ಳಲು ಭಾನುವಾರ ರಜೆಯ ಮೇಲೆ ಅಮ್ರೋಹಾಕ್ಕೆ ಬಂದಿದ್ದರು. ಗೂಳಿಯ ಕೊಂಬು ಹೊಟ್ಟೆಗೆ ಚುಚ್ಚಿದ್ದರಿಂದ ಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರ ಪತ್ನಿ ಸೋನಂ (25) ಮತ್ತು ಅವರ ಇಬ್ಬರು ಮಕ್ಕಳಿಗೂ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೂಳಿಯನ್ನು ಹಿಡಿದು ಗೋಶಾಲೆಗೆ ಕಳುಹಿಸುತ್ತೇವೆ ಎಂದು ಹಸನಪುರ ಎಸ್‌ಎಚ್‌ಒ ಸುಶೀಲ್ ವರ್ಮಾ ಹೇಳಿದ್ದಾರೆ. ಪಿಲಿಭಿತ್‌ನಲ್ಲಿ ನಡೆದ ಇಂತಹ  ಮತ್ತೊಂದು ಘಟನೆಯಲ್ಲಿ ಬಂಟಿ ಲೋಧಿ ಎಂದು ಗುರುತಿಸಲಾದ 24 ವರ್ಷದ ಯುವಕನೋರ್ವ ಮನೆಗೆ ಹೋಗುತ್ತಿದ್ದಾಗ ಬಿಡಾಡಿ ಗೂಳಿ ದಾಳಿ ಮಾಡಿತ್ತು. ನಂತರ ಅವರು ಕೂಡಾ ಸಾವನ್ನಪ್ಪಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT