ಆರೋಪಿ ಸಾಹಿಲ್ 
ದೇಶ

ಶಹಬಾದ್ ಡೈರಿ ಮರ್ಡರ್: 'ಲವ್ ಬ್ರೇಕ್ ಅಪ್' ನಿಂದ ಅಪ್ರಾಪ್ತೆಯ ಬರ್ಬರ ಹತ್ಯೆ- ಪೊಲೀಸರು

ವಾಯುವ್ಯ ದೆಹಲಿಯ ಶಹಬಾದ್ ಡೈರಿಯಲ್ಲಿ ಅಪ್ರಾಪ್ತ ಬಾಲಕಿಯ ಹತ್ಯೆ ಪ್ರಕರಣದ ಪ್ರಾಥಮಿಕ ತನಿಖೆ ವೇಳೆ, ಲವ್ ಬ್ರೇಕ್ ಅಪ್ ನಿಂದ ಕುಪಿತನಾದ ಆರೋಪಿ 20 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವುದಾಗಿ ಬಾಯ್ಬಿಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ನವದೆಹಲಿ: ವಾಯುವ್ಯ ದೆಹಲಿಯ ಶಹಬಾದ್ ಡೈರಿಯಲ್ಲಿ ಅಪ್ರಾಪ್ತ ಬಾಲಕಿಯ ಹತ್ಯೆ ಪ್ರಕರಣದ ಪ್ರಾಥಮಿಕ ತನಿಖೆ ವೇಳೆ, ಲವ್ ಬ್ರೇಕ್ ಅಪ್ ನಿಂದ ಕುಪಿತನಾದ ಆರೋಪಿ 20 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವುದಾಗಿ ಬಾಯ್ಬಿಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಹತ್ಯೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಸಾಹಿಲ್ ನನ್ನು ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ಸೋಮವಾರ ಬಂಧಿಸಲಾಗಿದೆ. 

ಅಪ್ರಾಪ್ತೆ ಸಾಕ್ಷಿ ತನ್ನ ಮಾಜಿ ಪ್ರಿಯಕರನೊಂದಿಗೆ ಸಂಬಂಧ ಹೊಂದಿದ್ದಾಳೆಂದು ಶಂಕಿಸಿದ ಆರೋಪಿ ಕೆಲವು ದಿನಗಳ ಹಿಂದೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದನು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆ ವೇಳೆಯೂ ಇದೇ ವಿಚಾರವನ್ನು ತಿಳಿಸಿದ ಆರೋಪಿ, ಭಾನುವಾರ ಸಂಜೆ 20 ಬಾರಿ ಚಾಕುವಿನಿಂದ ಇರಿದಿದ್ದು, ಆಕೆ ಮೇಲೆ ಸಿಮೆಂಟ್ ಚಪ್ಪಡಿ ಎತ್ತಿಹಾಕಿ ಕೊಂದಿರುವುದಾಗಿ ಒಪ್ಪಿಕೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ. 

ಮೃತಪಟ್ಟ ಬಾಲಕಿಯ ದೇಹದಲ್ಲಿ 34 ಗಾಯದ ಗುರುತುಗಳು ಕಂಡುಬಂದಿವೆ ಮತ್ತು ಆಕೆಯ ತಲೆಬುರುಡೆ ಛಿದ್ರಗೊಂಡಿದೆ. ಅಂತಿಮ ಮರಣೋತ್ತರ ಪರೀಕ್ಷೆಯ ವರದಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖೆ ವೇಳೆ ಪೊಲೀಸರು ಘಟನೆ ನಡೆದ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಆಕೆಯ ಕುಟುಂಬದವರನ್ನು ವಿಚಾರಿಸಿದಾಗ  ಸಾಹಿಲ್ ಜೊತೆಗೆ ಹೋಗಿರುವುದು ತಿಳಿದುಬಂದಿದೆ. ನಂತರ ಆ ಸ್ಥಳಕ್ಕೆ ಹೋದಾಗ ಹುಡುಗ ತಲೆಮರೆಸಿಕೊಂಡಿದ್ದ. "ಸಾಹಿಲ್‌ನ ಹಠಾತ್ ಆಗಮನದ ಬಗ್ಗೆ ಅವನ ಚಿಕ್ಕಮ್ಮ ಅವನ ತಂದೆಗೆ ಫೋನ್ ಮಾಡಿದಾಗ ಆತ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿರುವುದು ಪೊಲೀಸರಿಗೆ ಗೊತ್ತಾಗಿದೆ. ನಂತರ ಆತನನ್ನು ಬಂಧಿಸಿದ್ದಾರೆ.

ಸೋಮವಾರ ರಾತ್ರಿ ಆತನ ವೈದ್ಯಕೀಯ ಪರೀಕ್ಷೆ ನಡೆಸಿದ್ದು, ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, 2 ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT