ಆರೋಪಿ ಸಾಹಿಲ್ 
ದೇಶ

ಶಹಬಾದ್ ಡೈರಿ ಮರ್ಡರ್: 'ಲವ್ ಬ್ರೇಕ್ ಅಪ್' ನಿಂದ ಅಪ್ರಾಪ್ತೆಯ ಬರ್ಬರ ಹತ್ಯೆ- ಪೊಲೀಸರು

ವಾಯುವ್ಯ ದೆಹಲಿಯ ಶಹಬಾದ್ ಡೈರಿಯಲ್ಲಿ ಅಪ್ರಾಪ್ತ ಬಾಲಕಿಯ ಹತ್ಯೆ ಪ್ರಕರಣದ ಪ್ರಾಥಮಿಕ ತನಿಖೆ ವೇಳೆ, ಲವ್ ಬ್ರೇಕ್ ಅಪ್ ನಿಂದ ಕುಪಿತನಾದ ಆರೋಪಿ 20 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವುದಾಗಿ ಬಾಯ್ಬಿಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ನವದೆಹಲಿ: ವಾಯುವ್ಯ ದೆಹಲಿಯ ಶಹಬಾದ್ ಡೈರಿಯಲ್ಲಿ ಅಪ್ರಾಪ್ತ ಬಾಲಕಿಯ ಹತ್ಯೆ ಪ್ರಕರಣದ ಪ್ರಾಥಮಿಕ ತನಿಖೆ ವೇಳೆ, ಲವ್ ಬ್ರೇಕ್ ಅಪ್ ನಿಂದ ಕುಪಿತನಾದ ಆರೋಪಿ 20 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವುದಾಗಿ ಬಾಯ್ಬಿಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಹತ್ಯೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಸಾಹಿಲ್ ನನ್ನು ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ಸೋಮವಾರ ಬಂಧಿಸಲಾಗಿದೆ. 

ಅಪ್ರಾಪ್ತೆ ಸಾಕ್ಷಿ ತನ್ನ ಮಾಜಿ ಪ್ರಿಯಕರನೊಂದಿಗೆ ಸಂಬಂಧ ಹೊಂದಿದ್ದಾಳೆಂದು ಶಂಕಿಸಿದ ಆರೋಪಿ ಕೆಲವು ದಿನಗಳ ಹಿಂದೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದನು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆ ವೇಳೆಯೂ ಇದೇ ವಿಚಾರವನ್ನು ತಿಳಿಸಿದ ಆರೋಪಿ, ಭಾನುವಾರ ಸಂಜೆ 20 ಬಾರಿ ಚಾಕುವಿನಿಂದ ಇರಿದಿದ್ದು, ಆಕೆ ಮೇಲೆ ಸಿಮೆಂಟ್ ಚಪ್ಪಡಿ ಎತ್ತಿಹಾಕಿ ಕೊಂದಿರುವುದಾಗಿ ಒಪ್ಪಿಕೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ. 

ಮೃತಪಟ್ಟ ಬಾಲಕಿಯ ದೇಹದಲ್ಲಿ 34 ಗಾಯದ ಗುರುತುಗಳು ಕಂಡುಬಂದಿವೆ ಮತ್ತು ಆಕೆಯ ತಲೆಬುರುಡೆ ಛಿದ್ರಗೊಂಡಿದೆ. ಅಂತಿಮ ಮರಣೋತ್ತರ ಪರೀಕ್ಷೆಯ ವರದಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖೆ ವೇಳೆ ಪೊಲೀಸರು ಘಟನೆ ನಡೆದ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಆಕೆಯ ಕುಟುಂಬದವರನ್ನು ವಿಚಾರಿಸಿದಾಗ  ಸಾಹಿಲ್ ಜೊತೆಗೆ ಹೋಗಿರುವುದು ತಿಳಿದುಬಂದಿದೆ. ನಂತರ ಆ ಸ್ಥಳಕ್ಕೆ ಹೋದಾಗ ಹುಡುಗ ತಲೆಮರೆಸಿಕೊಂಡಿದ್ದ. "ಸಾಹಿಲ್‌ನ ಹಠಾತ್ ಆಗಮನದ ಬಗ್ಗೆ ಅವನ ಚಿಕ್ಕಮ್ಮ ಅವನ ತಂದೆಗೆ ಫೋನ್ ಮಾಡಿದಾಗ ಆತ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿರುವುದು ಪೊಲೀಸರಿಗೆ ಗೊತ್ತಾಗಿದೆ. ನಂತರ ಆತನನ್ನು ಬಂಧಿಸಿದ್ದಾರೆ.

ಸೋಮವಾರ ರಾತ್ರಿ ಆತನ ವೈದ್ಯಕೀಯ ಪರೀಕ್ಷೆ ನಡೆಸಿದ್ದು, ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, 2 ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT