ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರು ಮತ್ತು ವಾಹನ 
ದೇಶ

ಮೈಸೂರು ಬಳಿ ಅಪಘಾತಕ್ಕೆ 10 ಮಂದಿ ಸಾವು: ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರಿಗೆ ಪರಿಹಾರ

ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ನಿನ್ನೆ ಸೋಮವಾರ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದರು.

ಮೈಸೂರು/ನವದೆಹಲಿ: ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ನಿನ್ನೆ ಸೋಮವಾರ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದರು. ಅವರ ಕುಟುಂಬಸ್ಥರಿಗೆ ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಮತ್ತು ಗಾಯಗೊಂಡವರ ಚಿಕಿತ್ಸೆಗೆ ತಲಾ 50 ಸಾವಿರ ರೂಪಾಯಿ ಘೋಷಿಸಿದ್ದಾರೆ.

ಮೈಸೂರಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಪ್ರಾಣಹಾನಿ ಸಂಭವಿಸಿರುವುದು ಅತ್ಯಂತ ದುರದೃಷ್ಟಕರ. ಅಗಲಿದವರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನ ಮಂತ್ರಿಗಳು ತಿಳಿಸಿದ್ದಾರೆ.

ಅದೇ ರೀತಿ ಜಾರ್ಖಂಡ್ ನ ಧನ್ ಬಾದ್ ನಲ್ಲಿ ಸಂಭವಿಸಿದ ದುರಂತದಲ್ಲಿ ಮತ್ತು ರಾಜಸ್ತಾನದ ಜುಂಜುನುದಲ್ಲಿ ಟ್ರ್ಯಾಕ್ಟರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಮತ್ತು ಗಾಯಗೊಂಡವರಿಗೆ ಅಷ್ಟೇ ಮೊತ್ತದ ಪರಿಹಾರ ಘೋಷಿಸಲಾಗಿದೆ. 

ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT