ಕಪಿಲ್ ಸಿಬಲ್ 
ದೇಶ

ಧಾರ್ಮಿಕ ಆಚರಣೆಗಳಿಲ್ಲದ ಸಂಸತ್ ಇರುವ ಭಾರತ ಬೇಕು: ಕಪಿಲ್ ಸಿಬಲ್

ನೂತನ ಸಂಸತ್ ಭವನ ಉದ್ಘಾಟನೆ ಕುರಿತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ರಾಜ್ಯಸಭಾ ಸಂಸದ ಕಪಿಲ್ ಸಿಬಲ್, ಹೊಸ ಅಥವಾ ಹಳೆಯ ಭಾರತವಲ್ಲ, ತಮಗೆ ಬೇಕಿರುವುದು ಧಾರ್ಮಿಕ ಆಚರಣೆಗಳಿಲ್ಲದ ಸಂಸತ್ ಹೊಂದಿರುವ ಭಾರತ ಎಂದು ಹೇಳಿದ್ದಾರೆ. 

ನವದೆಹಲಿ: ನೂತನ ಸಂಸತ್ ಭವನ ಉದ್ಘಾಟನೆ ಕುರಿತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ರಾಜ್ಯಸಭಾ ಸಂಸದ ಕಪಿಲ್ ಸಿಬಲ್, ಹೊಸ ಅಥವಾ ಹಳೆಯ ಭಾರತವಲ್ಲ, ತಮಗೆ ಬೇಕಿರುವುದು ಧಾರ್ಮಿಕ ಆಚರಣೆಗಳಿಲ್ಲದ ಸಂಸತ್ ಹೊಂದಿರುವ ಭಾರತ ಎಂದು ಹೇಳಿದ್ದಾರೆ. 

ಕಾನೂನು ಎಲ್ಲರನ್ನು ಸಮಾನವಾಗಿ ಪರಿಗಣಿಸುತ್ತದೆ ಮತ್ತು ಧಾರ್ಮಿಕ ನಂಬಿಕೆಗಳಿಗಾಗಿ ನಾಗರಿಕರನ್ನು ಕೊಲ್ಲುವುದಿಲ್ಲ ಎಂದು ಸಿಬಲ್ ಹೇಳಿದ್ದಾರೆ. ಹೊಸ ಸಂಸತ್ ಭವನದ ಉದ್ಘಾಟನೆ ದೇಶದ ಅಭಿವೃದ್ಧಿ ಪಯಣದಲ್ಲಿ ‘ಅಮರ’ ಕ್ಷಣ ಎಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನಾ ಕಾರ್ಯಕ್ರಮವನ್ನು ಬಣ್ಣಿಸಿದ್ದರು. 

ಈ ಕಾರ್ಯಕ್ರಮದ ಬಗ್ಗೆ ಟ್ವೀಟ್ ಮಾಡಿರುವ ಸಿಬಲ್, 5.-6 ಅಂಶಗಳನ್ನು ಪ್ರಸ್ತಾಪಿಸಿದ್ದು, ತಮಗೆ ಬೇಕಿರುವ ಭಾರತವನ್ನು ಪಟ್ಟಿ ಮಾಡಿದ್ದಾರೆ. 1. "ತಮಗೆ ಬೇಕಿರುವುದು ಹೊಸ ಅಥವಾ ಹಳೆಯ ಭಾರತವಲ್ಲ, 2. ಧಾರ್ಮಿಕ ಪ್ರಕ್ರಿಯೆಗಳ ಹೊರತಾದ ಸಂಸತ್ ಇರುವ ಭಾರತ ಬೇಕು 3. ಎಲ್ಲರನ್ನೂ ಸಮಾನವಾಗಿ ನೋಡುವ ಕಾನೂನು ಇರಬೇಕು, 4. ಧಾರ್ಮಿಕ ನಂಬಿಕೆಗಳ ಆಧಾರದಲ್ಲಿ ಹತ್ಯೆ ನಡೆಯದಂತಹ ಭಾರತ ಬೇಕು, 5. ಯಾವುದೇ ಯುವತಿ/ಯುವಕ ಪ್ರೀತಿಸಿ ವಿವಾಹವಾದರೆ ಬಜರಂಗದಳದ ಭಯ ರಹಿತವಾಗಿರುವ ಭಾರತ ಬೇಕು. 6. ಮಾಧ್ಯಮಗಳು ತಟಸ್ಥವಾಗಿರಬೇಕು. ಎಂದು ಸಿಬಲ್ ಹೇಳಿದ್ದಾರೆ.

1.4 ಶತಕೋಟಿ ಮನಸ್ಸುಗಳ ಮಹತ್ವಾಕಾಂಕ್ಷೆಯ ತಳಹದಿಯನ್ನು ಹೊಂದಿರುವ ಚಿಂತನೆಯ ಸ್ವಾತಂತ್ರ್ಯ ಭಾರತವನ್ನು ಹೊಸತನ್ನಾಗಿ ಮಾಡುತ್ತದೆಯೇ ಹೊರತು. ಇಟ್ಟಿಗೆ ಮತ್ತು ಗಾರೆಗಳಲ್ಲ ಎಂದು ಸಿಬಲ್ ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT