ರಾಹುಲ್ ಗಾಂಧಿ 
ದೇಶ

ಪ್ರತಿಪಕ್ಷಗಳು ಒಗ್ಗೂಡಿದರೆ ಬಿಜೆಪಿ ಸೋಲಿಸಬಹುದು: ರಾಹುಲ್ ಗಾಂಧಿ

ಪ್ರತಿಪಕ್ಷಗಳು ಸೂಕ್ತರೀತಿಯಲ್ಲಿ ಹೊಂದಾಣಿಕೆ ಮಾಡಿಕೊಂಡರೆ ಆಡಳಿತಾರೂಢ ಬಿಜೆಪಿ ಪಕ್ಷವನ್ನು ಸೋಲಿಸಬಹುದು, ಕಾಂಗ್ರೆಸ್ ಪಕ್ಷವು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಹೇಳಿದ್ದಾರೆ.

ಸಾಂಟಾ ಕ್ಲಾರಾ: ಪ್ರತಿಪಕ್ಷಗಳು ಸೂಕ್ತರೀತಿಯಲ್ಲಿ ಹೊಂದಾಣಿಕೆ ಮಾಡಿಕೊಂಡರೆ ಆಡಳಿತಾರೂಢ ಬಿಜೆಪಿ ಪಕ್ಷವನ್ನು ಸೋಲಿಸಬಹುದು, ಕಾಂಗ್ರೆಸ್ ಪಕ್ಷವು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಹೇಳಿದ್ದಾರೆ.

ಸಾಂಟಾಕ್ರೂಜ್‌ನಲ್ಲಿರುವ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಸಿಲಿಕಾನ್ ವ್ಯಾಲಿ ಕ್ಯಾಂಪಸ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಬಿಜೆಪಿಯಲ್ಲಿನ ದುರ್ಬಲತೆಗಳು ಸ್ಪಷ್ಟವಾಗುತ್ತಿವೆ. ಪ್ರತಿಪಕ್ಷಗಳು ಸರಿಯಾಗಿ ಹೊಂದಾಣಿಕೆ ಮಾಡಿಕೊಂಡಿದ್ದೇ ಆದರೆ, ಬಿಜೆಪಿಯನ್ನು ಸೋಲಿಸಬಹುದು ಎಂದು ಹೇಳಿದ್ದಾರೆ.

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶವನ್ನು ಗಮನಿಸಿದರೆ, ಬಿಜೆಪಿ ವಿರುದ್ಧ ಹೋರಾಡಿ ಆ ಪಕ್ಷವನ್ನು ಸೋಲಿಸಬಹುದು ಎಂಬುದು ಅರಿವಿಗೆ ಬರುತ್ತಿದೆ. ಆದರೆ, ಈ ತಂತ್ರ ಅರ್ಥಮಾಡಿಕೊಳ್ಳಲು ಸಾಧ್ಯವಾಗಿರಲಿಲ್ಲ. ಈ ಚುನಾವಣೆ ಎದುರಿಸಲು ಕಾಂಗ್ರೆಸ್ ಪಕ್ಷ ಸಂಪೂರ್ಣ ವಿಭಿನ್ನವಾದ ವಿಧಾನವನ್ನು ಬಳಸಿತ್ತು. ಭಾರತ್ ಜೋಡೋ ಯಾತ್ರೆ ಬಳಿಕ ಈ ಬದಲಾವಣೆಗಳು ಕಂಡು ಬಂದವು ಎಂದು ತಿಳಿಸಿದರು.

224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ 10 ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದರೆ, ಹಾಲಿ ಬಿಜೆಪಿ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ನೇತೃತ್ವದ ಜನತಾ ದಳ (ಜಾತ್ಯತೀತ) ಕ್ರಮವಾಗಿ 66 ಮತ್ತು 19 ಸ್ಥಾನಗಳನ್ನು ಗಳಿಸಿತು.

ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್ ಪಕ್ಷಕ್ಕಿಂತ 10 ಪಟ್ಟು ಹೆಚ್ಚು ಹಣವನ್ನು ಖರ್ಚು ಮಾಡಿತ್ತು. 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಒಗ್ಗಟ್ಟಿನ ಮಂತ್ರ ಪಠಿಸುವುದು ಅಗತ್ಯವಿಗೆ. ಬಿಜೆಪಿ ಸೋಲಿಸಲು ಪ್ರತಿಪಕ್ಷಗಳ ಒಗ್ಗಟ್ಟು ಮಾತ್ರವಲ್ಲ ಪರ್ಯಾಯ ದೃಷ್ಟಿಕೋನದ ಅಗತ್ಯವಿದೆ ಎಂಬುದು ನನ್ನ ಅಭಿಪ್ರಾಯ.

ಭಾರತ್ ಜೋಡೋ ಯಾತ್ರೆಯ ಭಾಗವು ಅಂತಹ ದೃಷ್ಟಿಕೋನವನ್ನು ಪ್ರತಿಪಾದಿಸುವ ಮೊದಲ ಹೆಜ್ಜೆಯಾಗಿದೆ. ಇದು ಎಲ್ಲಾ ವಿರೋಧ ಪಕ್ಷಗಳು ಹೊಂದಿಕೊಂಡಿರುವ ದೃಷ್ಟಿಕೋನವಾಗಿದೆ. ಭಾರತ್ ಜೋಡೋ ಯಾತ್ರೆಯ ಕಲ್ಪನೆಯನ್ನು ಯಾವುದೇ ವಿರೋಧ ಪಕ್ಷವು ವಿರೋಧಿಸಲಿಲ್ಲ.

ಭಾರತ್ ಜೋಡೋ ಯಾತ್ರೆ (ಯುನೈಟ್ ಇಂಡಿಯಾ ಮಾರ್ಚ್) ಭಾರತವನ್ನು ಒಗ್ಗೂಡಿಸುವ ಗುರಿಯನ್ನು ಹೊಂದಿರುವ ಸಾಮೂಹಿಕ ಚಳುವಳಿಯಾಗಿದೆ. ಯಾತ್ರೆಯು ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಪ್ರಾರಂಭವಾಯಿತು, 12 ರಾಜ್ಯಗಳ ಮೂಲಕ ಹಾದುಹೋಯಿತು. ಜನವರಿ 31 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಕೊನೆಗೊಂಡಿತು.

ಯಾತ್ರೆ ವೇಳೆ 12 ಸಾರ್ವಜನಿಕ ಸಭೆಗಳು, 100 ಕ್ಕೂ ಹೆಚ್ಚು ಪ್ರಾದೇಶಿಕ ಸಭೆಗಳು ಮತ್ತು 13 ಪತ್ರಿಕಾಗೋಷ್ಠಿಗಳನ್ನು ನಡೆಸಲಾಯಿತು ಎಂದು ಮಾಹಿತಿ ನೀಡಿದರು.

ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಿಜೆಪಿ ಮತ್ತು ಆರೆಸ್ಸೆಸ್ ಸಂವಿಧಾನದ ಮೇಲೆ ದಾಳಿ ನಡೆಸುತ್ತಿದೆ ಎಂದು ಆರೋಪಿಸಿದರು,

ಇವರು ದೇಶವನ್ನು ಜಾತಿ ಮತ್ತು ಧಾರ್ಮಿಕ ಆಧಾರದ ಮೇಲೆ ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

SCROLL FOR NEXT