ಬ್ರಿಜ್ ಭೂಷಣ್ ಸಿಂಗ್ 
ದೇಶ

ಲೈಂಗಿಕ ಕಿರುಕುಳ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ: ಬ್ರಿಜ್ ಭೂಷಣ್ ಶರಣ್ ಸಿಂಗ್

ಕುಸ್ತಿ ಫೆಡರೇಷನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬುಧವಾರ ತಮ್ಮ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವುದಾಗಿ ಹೇಳಿದ್ದಾರೆ.

ಬಾರಾಬಂಕಿ: ಕುಸ್ತಿ ಫೆಡರೇಷನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬುಧವಾರ ತಮ್ಮ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವುದಾಗಿ ಹೇಳಿದ್ದಾರೆ.

ಉತ್ತರ ಪ್ರದೇಶದ ಈ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಂಗ್, 'ನನ್ನ ವಿರುದ್ಧದ ಒಂದೇ ಒಂದು ಆರೋಪ ಸಾಬೀತಾದರೆ, ನಾನು ನೇಣು ಹಾಕಿಕೊಳ್ಳುತ್ತೇನೆ' ಎಂದು ಹೇಳಿದರು.

ಪ್ರತಿಭಟನೆಯ ಸಂಕೇತವಾಗಿ ತಮ್ಮ ಪದಕಗಳನ್ನು ಗಂಗಾನದಿಯಲ್ಲಿ ಮುಳುಗಿಸುವುದಾಗಿ ಘೋಷಿಸಿದ್ದಕ್ಕಾಗಿ ಸಿಂಗ್ ಕುಸ್ತಿಪಟುಗಳನ್ನು ತರಾಟೆಗೆ ತೆಗೆದುಕೊಂಡರು.

ನಾಲ್ಕು ತಿಂಗಳಾಗಿದೆ. ಇನ್ನು ಅವರು ನನ್ನನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಸರ್ಕಾರ ನನ್ನನ್ನು ಗಲ್ಲಿಗೇರಿಸಲು ಹೋಗುತ್ತಿಲ್ಲ. ಆದ್ದರಿಂದ ಅವರು ಮಂಗಳವಾರ ಹರಿದ್ವಾರದಲ್ಲಿ ಜಮಾಯಿಸಿ ತಮ್ಮ ಪದಕಗಳನ್ನು ಗಂಗಾನದಿಯಲ್ಲಿ ಮುಳುಗಿಸುವುದಾಗಿ ಬೆದರಿಕೆ ಹಾಕಿದರು. ಇದು ನನಗೆ ಅವರು ಬಯಸುವ ಶಿಕ್ಷೆಯನ್ನು ತರುವುದಿಲ್ಲ. ಅದೆಲ್ಲ ಭಾವನಾತ್ಮಕ ನಾಟಕ ಎಂದು ಕಿಡಿಕಾರಿದರು.

ಕುಸ್ತಿಪಟುಗಳ ಬಳಿ ಯಾವುದೇ ಪುರಾವೆಗಳಿದ್ದರೆ ಅದನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಿ ಮತ್ತು ನಾನು ಯಾವುದೇ ಶಿಕ್ಷೆಯನ್ನು ಸ್ವೀಕರಿಸಲು ಸಿದ್ಧನಿದ್ದೇನೆ ಎಂದು ಸಿಂಗ್ ಹೇಳಿದರು. ಈ ಬಗ್ಗೆ ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕುಸ್ತಿಪಟುಗಳು ಮಾಡಿರುವ ಆರೋಪದಲ್ಲಿ ಸತ್ಯಾಂಶವಿದ್ದರೆ ನನ್ನನ್ನು ಬಂಧಿಸಲಾಗುತ್ತಿತ್ತು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT