ತೆಲಂಗಾಣ 
ದೇಶ

ತೆಲಂಗಾಣದಲ್ಲಿ ನೀತಿ ಸಂಹಿತೆ ಉಲ್ಲಂಘನೆ: ಈ ವರೆಗೂ 427 ಕೋಟಿ ರೂಪಾಯಿ ವಶಕ್ಕೆ 

ಚುನಾವಣಾ ಕಣವಾಗಿರುವ ತೆಲಂಗಾಣದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಭಾಗವಾಗಿ ಈ ವರೆಗೂ ವಶಕ್ಕೆ ಪಡೆದಿರುವ ಮೊತ್ತ 427 ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ.

ನವದೆಹಲಿ: ಚುನಾವಣಾ ಕಣವಾಗಿರುವ ತೆಲಂಗಾಣದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಭಾಗವಾಗಿ ಈ ವರೆಗೂ ವಶಕ್ಕೆ ಪಡೆದಿರುವ ಮೊತ್ತ 427 ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ.

ಅ.09 ರಿಂದ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ.

ಒಟ್ಟು 151.5 ಕೋಟಿ ರೂಪಾಯಿ ನಗದು, 263.7 ಕೆಜಿ ಚಿನ್ನ, 1091 ಕೆಜಿ ಬೆಳ್ಳಿ ಮತ್ತು 165.2 ಕೋಟಿ ರೂ.ಗೂ ಹೆಚ್ಚು ಬೆಲೆಬಾಳುವ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಜೊತೆಗೆ 44.9 ಕೋಟಿ ರೂಪಾಯಿ ಮೌಲ್ಯದ ಮದ್ಯ, 23.3 ಕೋಟಿ ಮೌಲ್ಯದ ಗಾಂಜಾ ಮತ್ತು 42 ಕೋಟಿ ರೂಪಾಯಿ ಮೌಲ್ಯದ ಇತರ ವಸ್ತುಗಳು/ಉಚಿತ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಚುನಾವಣಾ  ಸಿಇಒ ಕಚೇರಿಯ ಪ್ರಕಟಣೆ ತಿಳಿಸಿದೆ.

ರಾಜ್ಯದಲ್ಲಿ ನವೆಂಬರ್ 30 ರಂದು ಚುನಾವಣೆ ನಡೆಯಲಿದೆ.a

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT