ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ 
ದೇಶ

ಮಸೂದೆಗಳಿಗೆ ಒಪ್ಪಿಗೆ ನೀಡಲು ವಿಳಂಬ: ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿರುದ್ಧ 'ಸುಪ್ರೀಂ' ಮೆಟ್ಟಿಲೇರಿದ ಕೇರಳ

ರಾಜ್ಯ ವಿಧಾನಸಭೆ ಅಂಗೀಕರಿಸಿದ ಎಂಟು ಮಸೂದೆಗಳಿಗೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಒಪ್ಪಿಗೆ ನೀಡದೆ ಅನಗತ್ಯವಾಗಿ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೇರಳ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ.

ತಿರುವನಂತಪುರಂ: ರಾಜ್ಯ ವಿಧಾನಸಭೆ ಅಂಗೀಕರಿಸಿದ ಎಂಟು ಮಸೂದೆಗಳಿಗೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಒಪ್ಪಿಗೆ ನೀಡದೆ ಅನಗತ್ಯವಾಗಿ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೇರಳ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ.

ಇದರೊಂದಿಗೆ ಮೂರು ರಾಜ್ಯಗಳು ತಮ್ಮ ರಾಜ್ಯಪಾಲರ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದಂತಾಗಿದೆ. ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ಮತ್ತು ಪಂಜಾಬ್‌ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ನಂತರ ಈಗ ಆರಿಫ್ ಮೊಹಮ್ಮದ್ ಖಾನ್ ಅವರು ಮಸೂದೆಗಳಿಗೆ ಒಪ್ಪಿಗೆ ನೀಡದೆ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಉನ್ನತ ನ್ಯಾಯಾಲಯದಲ್ಲಿ ರಾಜ್ಯ ಸರ್ಕಾರಗಳು ಅರ್ಜಿ ಸಲ್ಲಿಸಿವೆ.

ಅರ್ಜಿಯ ಪ್ರಕಾರ, ಕಳೆದ ಎರಡು ವರ್ಷಗಳಿಂದ ರಾಜ್ಯಪಾಲರ ಮುಂದೆ ಮೂರು ವಿಧೇಯಕಗಳು ಬಾಕಿ ಉಳಿದಿವೆ ಎಂದು ಕೇರಳದ ಪಿಣರಾಯಿ ಸರ್ಕಾರ ಆರೋಪಿಸಿದೆ.

ರಿಟ್ ಅರ್ಜಿಯಲ್ಲಿ, ಕೇರಳ ಸರ್ಕಾರ, ಸಾಕಷ್ಟು ಸಮಯದಿಂದ ರಾಜ್ಯಪಾಲರ ಬಳಿ ಬಾಕಿ ಉಳಿದಿರುವ ಮಸೂದೆಗಳನ್ನು ಪಟ್ಟಿ ಮಾಡಿದ್ದು, ವಿಶ್ವವಿದ್ಯಾಲಯ ಕಾನೂನು ತಿದ್ದುಪಡಿ ಮಸೂದೆ, ಕೇರಳ ಸಹಕಾರ ಸಂಘಗಳ ಮಸೂದೆ 2022, ಕೇರಳ ಲೋಕಾಯುಕ್ತ ತಿದ್ದುಪಡಿ ಮಸೂದೆ 2022, ಮತ್ತು ಸಾರ್ವಜನಿಕ ಆರೋಗ್ಯ ಮಸೂದೆ 2021ಕ್ಕೆ ಆರಿಫ್ ಮೊಹಮ್ಮದ್ ಖಾನ್ ಅವರು ಅನುಮೋದನೆ ನೀಡಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT