ಮನೋಜ್ ಜಾರಂಗೆ 
ದೇಶ

ಮರಾಠ ಮೀಸಲಾತಿ ಕಾರ್ಯಕರ್ತ ಮನೋಜ್ ಜಾರಂಗೆ ಉಪವಾಸ ಸತ್ಯಾಗ್ರಹ ಹಿಂದಕ್ಕೆ: ಸರ್ಕಾರಕ್ಕೆ 2 ತಿಂಗಳ ಗಡುವು

ಮರಾಠಾ ಮೀಸಲಾತಿ (Maratha reservation) ಆಂದೋಲನದ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್​ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ಹಿಂಪಡೆದಿದ್ದಾರೆ.

ಮುಂಬೈ: ಮರಾಠಾ ಮೀಸಲಾತಿ (Maratha reservation) ಆಂದೋಲನದ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್​ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ಹಿಂಪಡೆದಿದ್ದಾರೆ.

ಸರ್ಕಾರದ ನಿಯೋಗ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಬೆನ್ನಲ್ಲೇ ಅವರು ಉಪವಾಸ ಹಿಂಪಡೆದಿದ್ದಾರೆ. 

ಉಪವಾಸ ಅಂತ್ಯಗೊಳಿಸುವುದಕ್ಕೂ ಮುನ್ನ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿರುವ ಅವರು, 2 ತಿಂಗಳ ಒಳಗಾಗಿ ತಮ್ಮ ಬೇಡಿಕೆಗೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದೇ ಇದ್ದರೆ, ಮುಂಬೈ ಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗುವುದು ಎಂಬ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳಾದ ಸಂದೀಪ್ ಶಿಂಧೆ, ಎಂಜಿ ಗಾಯಕವಾಡ್ ಮತ್ತು ಕೆಲವು ಅಧಿಕಾರಿಗಳ ನಿಯೋಗವೂ ಜಾರಂಗೆ ಅವರನ್ನು ಭೇಟಿ ಮಾಡಿದೆ. 

ಜಾರಂಗೆ ಯಾವುದೇ ತಕರಾರಿಲ್ಲದ, "ಮೀಸಲಾತಿ" ಜಾರಿಗೊಳಿಸಲು ಒತ್ತಾಯಿಸಿದರು ಮತ್ತು ರಾಜ್ಯ ಸರ್ಕಾರವು ಆ ಭರವಸೆಯನ್ನು ನೀಡುವಂತೆ ಕೇಳಿದರು.

ಮುಖ್ಯಮಂತ್ರಿ ಏಕನಾಥ್ ಶಿಂಧೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಮನೋಜ ಜಾರಂಗೆ ಪಾಟೀಲ್​ ಹಾಗೂ ಸಕಲ ಮರಾಠ ಸಮುದಾಯಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಕಾನೂನು ತಜ್ಞರೊಬ್ಬರು ಉಪವಾಸ ಸತ್ಯಾಗ್ರಹ ನಡೆಸುತ್ತಿರುವವರನ್ನು ಮನವೊಲಿಸಲು ನಿಯೋಗದಲ್ಲಿ ಜೊತೆಯಾಗಿರುವುದು ಇತಿಹಾಸದಲ್ಲೇ ಮೊದಲ ನಿದರ್ಶನವಾಗಲಿದೆ. ಗಾಯಕ್ವಾಡ್ ಅವರಿಗೆ ಈ ವಿಷಯದ ಸಂಪೂರ್ಣ ಜ್ಞಾನವಿತ್ತು. ನಿವೃತ್ತ ನ್ಯಾಯಾಧೀಶರ ಜತೆ ಮಾತನಾಡಿದ ಬಳಿಕ ಮನೋಜ್ ಜಾರಂಗೆ ಅವರಿಗೆ ಮನವರಿಕೆ ಆಗಿರಬೇಕು ಎಂದು ಸಿಎಂ ಶಿಂಧೆ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT