ಜ್ಞಾನವಾಪಿ ಮಸೀದಿ (ಸಂಗ್ರಹ ಚಿತ್ರ) 
ದೇಶ

ಜ್ಞಾನವಾಪಿ ಪ್ರಕರಣ ಮತ್ತೊಂದು ಪೀಠಕ್ಕೆ ವರ್ಗಾವಣೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಜ್ಞಾನವಾಪಿ ಪ್ರಕರಣವನ್ನು 2021ರಿಂದ ವಿಚಾರಣೆ ನಡೆಸುತ್ತಿರುವ ಏಕಸದಸ್ಯ ಪೀಠದಿಂದ ಮತ್ತೊಂದು ಪೀಠಕ್ಕೆ ವರ್ಗಾವಣೆ ಮಾಡಿದ್ದ ಅಲಹಾಬಾದ್‌ ಹೈಕೋರ್ಟ್‌ ಮುಖ್ಯ ನ್ಯಾಯಾಧೀಶರ ಆಡಳಿತಾತ್ಮಕ ನಿರ್ಧಾರವನ್ನು ಪ್ರಶ್ನಿಸಿ ಅಂಜುಮನ್‌...

ನವದೆಹಲಿ: ಜ್ಞಾನವಾಪಿ ಪ್ರಕರಣವನ್ನು 2021ರಿಂದ ವಿಚಾರಣೆ ನಡೆಸುತ್ತಿರುವ ಏಕಸದಸ್ಯ ಪೀಠದಿಂದ ಮತ್ತೊಂದು ಪೀಠಕ್ಕೆ ವರ್ಗಾವಣೆ ಮಾಡಿದ್ದ ಅಲಹಾಬಾದ್‌ ಹೈಕೋರ್ಟ್‌ ಮುಖ್ಯ ನ್ಯಾಯಾಧೀಶರ ಆಡಳಿತಾತ್ಮಕ ನಿರ್ಧಾರವನ್ನು ಪ್ರಶ್ನಿಸಿ ಅಂಜುಮನ್‌ ಇಂತೇಜಾಮಿಯಾ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ.

ವಾರಣಾಸಿಯಲ್ಲಿ ಜ್ಞಾನವಾಪಿ ಮಸೀದಿ ಇರುವ ದೇವಾಲಯವನ್ನು ಮರುಸ್ಥಾಪಿಸಲು ಕೋರಿ ಹೂಡಿರುವ ದಾವೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ವಿಚಾರಣೆ ನಡೆಸುತ್ತಿತ್ತು. ಅದನ್ನು ಮತ್ತೊಂದು ಪೀಠಕ್ಕೆ ವರ್ಗಾವಣೆ ಮಾಡಲಾಗಿದೆ.

ಪ್ರಕರಣ ವರ್ಗಾವಣೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ, ಮಸೀದಿ ಸಮಿತಿಯನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಹುಝೆಫಾ ಅಹ್ಮದಿ ಅವರ ವಾದವನ್ನು ಆಲಿಸಿದ ನಂತರ ಅರ್ಜಿ ವಜಾಗೊಳಿಸಿದೆ.

"ಹೈಕೋರ್ಟ್‌ ಮುಖ್ಯ ನ್ಯಾಯಾಧೀಶರ ಆದೇಶದಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ. ಹೈಕೋರ್ಟ್‌ಗಳಲ್ಲಿ ಇದು ಅತ್ಯಂತ ಪ್ರಮಾಣಿತ ಅಭ್ಯಾಸವಾಗಿದೆ. ಇದು ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರ ವ್ಯಾಪ್ತಿಯಲ್ಲಿರುತ್ತದೆ" ಎಂದು ಪೀಠ ಹೇಳಿದೆ.

ಅರ್ಜಿಯನ್ನು ವಜಾಗೊಳಿಸುವ ಮೊದಲು, ಸಿಜೆಐ ಪ್ರಕರಣದ ವರ್ಗಾವಣೆಗೆ ಕಾರಣಗಳನ್ನು ಪರಿಶೀಲಿಸಿದರು ಮತ್ತು ಅದನ್ನು ತೆರೆದ ನ್ಯಾಯಾಲಯದಲ್ಲಿ ಓದಲು ಬಯಸುವುದಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT