ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್‌ಗಢ: ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟ, ಚುನಾವಣಾ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಯೋಧ ಸಾವು

ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಗಡಿ ಭದ್ರತಾ ಪಡೆಯ ಯೋಧನೊಬ್ಬ ತನ್ನ ಬಳಿಯಿದ್ದ ಗ್ರೆನೇಡ್ ಆಕಸ್ಮಿಕವಾಗಿ ಸ್ಫೋಟಗೊಂಡ ಪರಿಣಾಮ ಮೃತಪಟ್ಟಿದ್ದಾರೆ ಎಂದು ಪೊಲೀಸರು...

ದಾಂತೇವಾಡ: ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಗಡಿ ಭದ್ರತಾ ಪಡೆಯ ಯೋಧನೊಬ್ಬ ತನ್ನ ಬಳಿಯಿದ್ದ ಗ್ರೆನೇಡ್ ಆಕಸ್ಮಿಕವಾಗಿ ಸ್ಫೋಟಗೊಂಡ ಪರಿಣಾಮ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಚುನಾವಣಾ ಕರ್ತವ್ಯಕ್ಕಾಗಿ ಕಾಟೇಕಲ್ಯಾಣ ಪೊಲೀಸ್ ಠಾಣೆಯಲ್ಲಿ ಬೀಡುಬಿಟ್ಟಿದ್ದ ಬಿಎಸ್‌ಎಫ್‌ನ 70ನೇ ಬೆಟಾಲಿಯನ್‌ ತಂಡ ಶೋಧ ಕಾರ್ಯಾಚರಣೆ ಆರಂಭಿಸಲು ಮುಂದಾದಾಗ ಈ ಸ್ಫೋಟ ಸಂಭವಿಸಿದೆ ಎಂದು ದಾಂತೇವಾಡದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೆಟ್ರೋಲಿಂಗ್ ತಂಡ, ಪೊಲೀಸ್ ಠಾಣೆ ಆವರಣದಿಂದ ಹೊರಗೆ ಹೋಗುತ್ತಿದ್ದಾಗ ಹೆಡ್ ಕಾನ್‌ಸ್ಟೆಬಲ್ ಬಲ್ಬೀರ್ ಚಂದ್ ಅವರು ಧರಿಸಿದ್ದ ಪೌಚ್‌ನಲ್ಲಿದ್ದ ಹ್ಯಾಂಡ್ ಗ್ರೆನೇಡ್ ಸ್ಫೋಟಗೊಂಡಿದೆ ಎಂದು ಅವರು ಹೇಳಿದ್ದಾರೆ.

ಸ್ಫೋಟದಲ್ಲಿ ಚಾಂದ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ದಾಂತೇವಾಡ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಚಂದ್ ಹಿಮಾಚಲ ಪ್ರದೇಶದ ನಿವಾಸಿಯಾಗಿದ್ದು, ಘಟನೆಯ ಬಗ್ಗೆ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ದಾಂತೇವಾಡ ಸೇರಿದಂತೆ ಛತ್ತೀಸ್‌ಗಢದ 20 ವಿಧಾನಸಭಾ ಕ್ಷೇತ್ರಗಳಲ್ಲಿ ನವೆಂಬರ್ 7 ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT