ಅಖಿಲೇಶ್ ಯಾದವ್- ಸೋನಿಯಾ ಗಾಂಧಿ 
ದೇಶ

ಕುತಂತ್ರ ಪಕ್ಷ ಕಾಂಗ್ರೆಸ್ ನಂಬಬೇಡಿ: ಅಖಿಲೇಶ್ ಯಾದವ್ ವಾಗ್ದಾಳಿ

ಕಾಂಗ್ರೆಸ್ ಹಾಗೂ ಅದರ ಮೈತ್ರಿಕೂಟ INDIA ವಿರುದ್ಧ ವಾಗ್ದಾಳಿ ನಡೆಸಿರುವ ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್, ಕಾಂಗ್ರೆಸ್ ಪಕ್ಷವನ್ನು ಮೋಸ ಮಾಡುವ ಪಕ್ಷ ಎಂದು ಜರಿದಿದ್ದಾರೆ.

ಭೋಪಾಲ್: ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್, ಕಾಂಗ್ರೆಸ್ ಪಕ್ಷವನ್ನು ಮೋಸ ಮಾಡುವ ಪಕ್ಷ ಎಂದು ಜರಿದಿದ್ದಾರೆ.
 
ತಮಗೆ ಕಾಂಗ್ರೆಸ್ ಮೋಸ ಮಾಡಿದೆ ಎಂದು ಆರೋಪಿಸಿರುವ ಅಖಿಲೇಶ್ ಯಾದವ್, ಮುಂಬರುವ ಚುನಾವಣೆಯಲ್ಲಿ ಜನತೆಗೆ ಕಾಂಗ್ರೆಸ್ ನ್ನು ನಂಬದಂತೆ ಕರೆ ನೀಡಿದ್ದಾರೆ. 

ಕಾಂಗ್ರೆಸ್ ಕುತಂತ್ರ ಮಾಡುವ ಪಕ್ಷವಾಗಿದ್ದು ಅದಕ್ಕೆ ಮತ ನೀಡಬೇಡಿ, ಮತಕ್ಕಾಗಿ ಕಾಂಗ್ರೆಸ್ ಈಗ ಜಾತಿಗಣತಿಯನ್ನು ಬೆಂಬಲಿಸುತ್ತಿದೆ. ಕಾಂಗ್ರೆಸ್ ನಮಗೆ ಮೋಸ ಮಾಡಿರಬೇಕಾದರೆ, ಸಾರ್ವಜನಿಕರು ಹೇಗೆ ಅದಕ್ಕೆ ಮುಖ್ಯವಾಗುತ್ತಾರೆ? ಎಂದು ಅಖಿಲೇಶ್ ಯಾದವ್ ಮಧ್ಯಪ್ರದೇಶದ ಜತಾರಾ ಕ್ಷೇತ್ರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ವಾಗ್ದಾಳಿ ನಡೆಸಿದ್ದಾರೆ. 

2024ರ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿರುವ ವೇಳೆಗೆ ಬಿಜೆಪಿ ಕೂಡ ಜಾತಿ ಆಧಾರಿತ ಜನಗಣತಿಗೆ ಬೆಂಬಲ ನೀಡಲಿದೆ ಏಕೆಂದರೆ ಇದು ಮತದಾರರ ಬೇಡಿಕೆಯಾಗಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಎಸ್‌ಪಿ ಮುಖ್ಯಸ್ಥರು ಕಳಪೆ ಮೂಲಸೌಕರ್ಯ ಮತ್ತು ಮಹಿಳೆಯರ ಸುರಕ್ಷತೆಯ ಬಗ್ಗೆ ಮಧ್ಯಪ್ರದೇಶದ ಈಗಿನ ಸರ್ಕಾರವನ್ನು ಗುರಿಯಾಗಿಸಿ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ಮೋದಿಯವರ ಉಚಿತ ಪಡಿತರ ಯೋಜನೆಗೆ ಪ್ರತಿಕ್ರಿಯಿಸಿದ ಯಾದವ್, "ನೀವು ಪಡಿತರವಾಗಿ ಏನನ್ನೂ ಪಡೆಯದಿದ್ದರೆ, ನೀವು ಬಿಜೆಪಿಗೆ ಏಕೆ ಮತ ಹಾಕುತ್ತೀರಿ? ಎಂದು ಜನತೆಯನ್ನು ಪ್ರಶ್ನಿಸಿದ್ದು ಬಿಜೆಪಿ ಸರ್ಕಾರವನ್ನು ಲೂಟ್ ತಾಂತ್ರಿಕ್ ಸರ್ಕಾರ ಎಂದು ತಿವಿದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT