ಅರವಿಂದ್ ಕೇಜ್ರಿವಾಲ್ 
ದೇಶ

ಕೇಜ್ರಿವಾಲ್ ರನ್ನು ಬಂಧಿಸಿದರೂ ಅವರೇ ಸಿಎಂ ಆಗಿ ಮುಂದುವರಿಯಬೇಕು: ಆಪ್ ಶಾಸಕರ ಆಗ್ರಹ

ಯಾವುದೇ ತನಿಖಾ ಸಂಸ್ಥೆಯಿಂದ ಬಂಧಿಸಲ್ಪಟ್ಟರೂ ದೆಹಲಿ ಮುಖ್ಯಮಂತ್ರಿಯಾಗಿ ಅರವಿಂದ್ ಕೇಜ್ರಿವಾಲ್ ಅವರನ್ನು ಮುಂದುವರಿಸಬೇಕು ಎಂದು ಪಕ್ಷದ ಎಲ್ಲಾ ಶಾಸಕರು ಒತ್ತಾಯಿಸಿರುವುದಾಗಿ ಎಎಪಿ ಸೋಮವಾರ ತಿಳಿಸಿದೆ.

ನವದೆಹಲಿ: ಯಾವುದೇ ತನಿಖಾ ಸಂಸ್ಥೆಯಿಂದ ಬಂಧಿಸಲ್ಪಟ್ಟರೂ ದೆಹಲಿ ಮುಖ್ಯಮಂತ್ರಿಯಾಗಿ ಅರವಿಂದ್ ಕೇಜ್ರಿವಾಲ್ ಅವರನ್ನು ಮುಂದುವರಿಸಬೇಕು ಎಂದು ಪಕ್ಷದ ಎಲ್ಲಾ ಶಾಸಕರು ಒತ್ತಾಯಿಸಿರುವುದಾಗಿ ಎಎಪಿ ಸೋಮವಾರ ತಿಳಿಸಿದೆ.

ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಿ ಎಂದು ಕಳೆದ ವಾರ ಜಾರಿ ನಿರ್ದೇಶನಾಲಯ ದೆಹಲಿ ಸಿಎಂ ಕೇಜ್ರಿವಾಲ್ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಆದರೆ ಇದು "ರಾಜಕೀಯ ಪ್ರೇರಿತ" ಎಂದ ಕೇಜ್ರಿವಾಲ್ ಅವರು ವಿಚಾರಣೆಗೆ ಗೈರು ಆಗಿದ್ದಾರೆ.

ಪಕ್ಷದ ಸಚಿವರು ಮತ್ತು ಮುಖಂಡರ ವಿರುದ್ಧ ಕೇಂದ್ರ ತನಿಖಾ ಸಂಸ್ಥೆಗಳ ಇತ್ತೀಚಿನ ಕ್ರಮಗಳ ಬಗ್ಗೆ ತೀವ್ರ ಆಕ್ರೋಶ ಆಪ್ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು, ಸೋಮವಾರ ಶಾಸಕರ ಸಭೆ ಕರೆದಿದ್ದರು.

ಸಭೆಯ ನಂತರ ಮಾತನಾಡಿದ ದೆಹಲಿ ಸಚಿವ ಸೌರಭ್ ಭಾರದ್ವಾಜ್ ಅವರು, ಸಭೆಯಲ್ಲಿದ್ದ ಎಲ್ಲಾ ಶಾಸಕರು, ಕೇಜ್ರಿವಾಲ್ ಅವರಿಗೆ ಸರ್ಕಾರ ನಡೆಸಲು ದೆಹಲಿ ಜನ ಆದೇಶ ನೀಡಿರುವುದರಿಂದ ಅವರನ್ನು ಬಂಧಿಸಿದರೂ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಆಗ್ರಹಿಸಿದ್ದಾರೆ.

ಸಭೆಗಳಿಗಾಗಿ ಅಧಿಕಾರಿಗಳು ಸಹ ಜೈಲಿಗೆ ಹೋಗುತ್ತಾರೆ ಮತ್ತು "ನಮ್ಮನ್ನು ಕರೆದರೆ ನಾವು ಸಹ ಸಂತೋಷದಿಂದ ಜೈಲಿಗೆ ಹೋಗಿ ಸಭೆಯಲ್ಲಿ ಭಾಗವಹಿಸುತ್ತೇವೆ" ಎಂದು ಭಾರದ್ವಾಜ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT