ಉದಯನಿಧಿ ಸ್ಟಾಲಿನ್ 
ದೇಶ

ಕೊನೆಯವರೆಗೂ ಸನಾತನ ಧರ್ಮ ವಿರೋಧಿಸುತ್ತಲೇ ಇರುತ್ತೇನೆ: ಉದಯನಿಧಿ ಸ್ಟಾಲಿನ್

ಕೊನೆವರೆಗೂ ಸನಾತನ ಧರ್ಮ ವಿರೋಧಿಸುತ್ತೇನೆ ಎಂದು ತಮಿಳುನಾಡು ಸಚಿವ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತೆ ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.

ಚೆನ್ನೈ: ಕೊನೆವರೆಗೂ ಸನಾತನ ಧರ್ಮ ವಿರೋಧಿಸುತ್ತೇನೆ ಎಂದು ತಮಿಳುನಾಡು ಸಚಿವ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತೆ ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.

ಸನಾತನ ಧರ್ಮವನ್ನು‘ಡೆಂಗ್ಯೂ’ ಮತ್ತು ‘ಮಲೇರಿಯಾ’ಗೆ ಹೋಲಿಸಿದ್ದ ಉದಯನಿಧಿ ಸ್ಟಾಲಿನ್, ತಾನು ಯಾವುದೇ ತಪ್ಪು ಹೇಳಿಕೆ ನೀಡಿಲ್ಲ ಎಂದಿದ್ದರು. ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಕಾನೂನು ಪರಿಣಾಮ ಎದುರಿಸಲು ಸಿದ್ಧ ಎಂದು ಹೇಳಿದ್ದರು.

ನಾನೇನೂ ತಪ್ಪಾಗಿ ಹೇಳಿಲ್ಲ. ನಾನು ಹೇಳಿದ್ದು ಸರಿ, ಅದನ್ನು ಕಾನೂನಾತ್ಮಕವಾಗಿ ಎದುರಿಸುತ್ತೇನೆ. ನನ್ನ ಹೇಳಿಕೆಯನ್ನು ಬದಲಾಯಿಸುವುದಿಲ್ಲ. ನನ್ನ ಸಿದ್ಧಾಂತವನ್ನು ಮಾತನಾಡಿದ್ದೇನೆ. ಅಂಬೇಡ್ಕರ್, ಪೆರಿಯಾರ್ ಹೇಳಿದ್ದಕ್ಕಿಂತ ಹೆಚ್ಚಾಗಿ ಮಾತನಾಡಿಲ್ಲ. ನಾನು ಎಂಎಲ್ಎ ಆಗಬಹುದು, ಮಂತ್ರಿಯಾಗಬಹುದು ಅಥವಾ ಯುವ ಘಟಕದ ಕಾರ್ಯದರ್ಶಿಯಾಗಿ ನಾಳೆ ನಾನು ಇರಬಹುದು. ಆದರೆ ಮನುಷ್ಯನಾಗಿರುವುದು ಹೆಚ್ಚು ಮುಖ್ಯ ಎಂದು ತಿಳಿಸಿದ್ದಾರೆ.

ನಾವು ಹಲವಾರು ವರ್ಷಗಳಿಂದ ಸನಾತನದ ಬಗ್ಗೆ ಮಾತನಾಡುತ್ತಿದ್ದೇವೆ. ಇದು (ಸನಾತನ) ನೂರಾರು ವರ್ಷಗಳ ಸಮಸ್ಯೆಯಾಗಿದೆ. ನಾವು ಇದನ್ನು ಕೊನೆವರೆಗೂ ವಿರೋಧಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಸೆಪ್ಟೆಂಬರ್‌ನಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್‌, ಸನಾತನ ಧರ್ಮದ ನಿರ್ಮೂಲನೆ ಆಗಬೇಕು. ಅದು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ ಎಂದು ಕರೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT