ಬಿಹಾರ ಸಿಎಂ ನಿತೀಶ್‌ ಕುಮಾರ್ 
ದೇಶ

ಮಹಿಳೆ ಶಿಕ್ಷಣ ಪಡೆದರೆ ಜನನ ಪ್ರಮಾಣ ಇಳಿಕೆ ಹೇಳಿಕೆ: ಕ್ಷಮೆಯಾಚಿಸಿದ ಬಿಹಾರ ಸಿಎಂ ನಿತೀಶ್‌ ಕುಮಾರ್

ರಾಜ್ಯ ವಿಧಾನಸಭೆಯಲ್ಲಿ ಜನಸಂಖ್ಯೆ ನಿಯಂತ್ರಣ ಕುರಿತು ನೀಡಿದ್ದ ಹೇಳಿಕೆ ವಿವಾದ ಸೃಷ್ಟಿಸಿದ್ದು, ಇದರ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ತಮ್ಮ ಹೇಳಿಕೆ ಕುರಿತು ಕ್ಷಮೆಯಾಚಿಸಿದ್ದಾರೆ.

ಪಾಟ್ನ (ಬಿಹಾರ): ರಾಜ್ಯ ವಿಧಾನಸಭೆಯಲ್ಲಿ ಜನಸಂಖ್ಯೆ ನಿಯಂತ್ರಣ ಕುರಿತು ನೀಡಿದ್ದ ಹೇಳಿಕೆ ವಿವಾದ ಸೃಷ್ಟಿಸಿದ್ದು, ಇದರ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ತಮ್ಮ ಹೇಳಿಕೆ ಕುರಿತು ಕ್ಷಮೆಯಾಚಿಸಿದ್ದಾರೆ.

ಜಾತಿ ಸಮೀಕ್ಷೆಯ ಸಂಪೂರ್ಣ ವರದಿಯನ್ನು ಬಿಡುಗಡೆ ಮಾಡಿದ ನಂತರ ಬಿಹಾರ ಸಿಎಂ ಜನಸಂಖ್ಯಾ ನಿಯಂತ್ರಣದ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ್ದರು.
 
ಜನಸಂಖ್ಯೆ ನಿಯಂತ್ರಣದಲ್ಲಿ ಮಹಿಳೆಯರು ಶಿಕ್ಷಣ ಹೊಂದಿರುವುದು ಮಹತ್ವದ ಪಾತ್ರವಹಿಸುತ್ತದೆ ಎಂದು ಹೇಳಿದ ನಿತೀಶ್‌ ಕುಮಾರ್‌, ‘ಒಬ್ಬ ಸುಶಿಕ್ಷಿತ ಮಹಿಳೆಯು ಗಂಡ ಲೈಂಗಿಕ ಕ್ರಿಯೆಯಲ್ಲಿ ತೊಡಗದಂತೆ ನಿರ್ಬಂಧ ಹೇರಬಲ್ಲವಳಾಗಿರುತ್ತಾಳೆ’ ಎಂದು ವಿವರಿಸಿದರು.

‘ಜನನ ಪ್ರಮಾಣ ಹೆಚ್ಚಳಕ್ಕೆ ಪತಿಯ ಕೃತ್ಯವೇ ಕಾರಣವಾಗುತ್ತದೆ. ಆದರೆ, ಶಿಕ್ಷಣ ಪಡೆದ ಮಹಿಳೆಯು ಪತಿಯನ್ನು ನಿರ್ಬಂಧಿಸುವ ಕುರಿತು ತಿಳಿದುಕೊಂಡಿರುತ್ತಾಳೆ. ಜನನ ಪ್ರಮಾಣದಲ್ಲಿ ಇಳಿಕೆಯಾಗಿರುವುದಕ್ಕೆ ಮಹಿಳೆಯರು ಶಿಕ್ಷಣ ಪಡೆದಿರುವುದೇ ಕಾರಣ’ ಎಂದು ತಮ್ಮದೇ ಶೈಲಿಯಲ್ಲಿ ಹೇಳಿದ್ದರು.

‘ಇದನ್ನು ನೀವೂ ಚೆನ್ನಾಗಿ ಅರ್ಥ ಮಾಡಿಕೊಂಡಿರುತ್ತೀರಿ. ಈ ಹಿಂದೆ ಫಲವತ್ತತೆ ಪ್ರಮಾಣ 4.3ರಷ್ಟಿತ್ತು. ಈಗ 2.9ರಷ್ಟಿದ್ದು, ಶೀಘ್ರವೇ ಈ ಪ್ರಮಾಣ 2ರ ಗಡಿ ತಲುಪಲಿದೆ’ ಎಂದು ತಿಳಿಸಿದ್ದರು. ಈ ಹೇಳಿಕೆ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

ಹೇಳಿಕೆ ಸಂಬಂಧ ರಾಜಕೀಯ ನಾಯಕರು, ರಾಷ್ಟ್ರೀಯ ಮಹಿಳಾ ಆಯೋಗ ಆಕ್ರೋಶ ವ್ಯಕ್ತಪಡಿಸಿದೆ. ನಿತೀಶ್ ಕುಮಾರ್ ಕೂಡಲೇ ಕ್ಷಮೆಯಾಚಿಸಬೇಕು ಎಂದು ಎನ್‌ಸಿಡಬ್ಲ್ಯೂ ಮುಖ್ಯಸ್ಥೆ ರೇಖಾ ಶರ್ಮಾ ಒತ್ತಾಯಿಸಿದ್ದಾರೆ.

ವಿಧಾನಸಭೆಯಲ್ಲಿ ನಿತೀಶ್​ ಕುಮಾರ್ ಆಡಿರುವ ಅಸಭ್ಯ ಮಾತುಗಳಿಂದ ಪ್ರತಿಯೊಬ್ಬ ಮಹಿಳೆಯ ಘನತೆ ಹಾಗೂ ಗೌರವಕ್ಕೆ ಧಕ್ಕೆಯುಂಟಾಗಿದೆ. ಅವರ ಭಾಷಣದಲ್ಲಿ ಬಳಸಲಾದ ಭಾಷೆಯು ಸಮಾಜಕ್ಕೆ ಕಪ್ಪುಚುಕ್ಕೆಯಾಗಿದೆ. ನಾವು ಅಂತಹ ನಡವಳಿಕೆ ವಿರುದ್ಧ ಬಲವಾಗಿ ನಿಲ್ಲುತ್ತೇವೆ ಎಂದು ರೇಖಾ ತಿಳಿಸಿದ್ದಾರೆ.

ಹೇಳಿಕೆ ವಿವಾದ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ಅವರು, ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದು, ಹೇಳಿಕೆ ಹಿಂದಕ್ಕೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT