ಸಾಂದರ್ಭಿಕ ಚಿತ್ರ 
ದೇಶ

ಮಾನವ ಕಳ್ಳಸಾಗಣೆ ಪ್ರಕರಣ: ಕರ್ನಾಟಕ ಸೇರಿ 10 ರಾಜ್ಯಗಳಲ್ಲಿ NIA ದಾಳಿ, ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶಿಯರ ಬಂಧನ

ಮಾನವ ಕಳ್ಳ ಸಾಗಣೆ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ದಳ(National Investigative agency-NIA) ದೇಶದ 10 ರಾಜ್ಯಗಳ ವಿವಿಧ ಕಡೆಗಳಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ.  

ನವದೆಹಲಿ/ಬೆಂಗಳೂರು: ಮಾನವ ಕಳ್ಳ ಸಾಗಣೆ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ದಳ(National Investigative agency-NIA) ದೇಶದ 10 ರಾಜ್ಯಗಳ ವಿವಿಧ ಕಡೆಗಳಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ.  

ತ್ರಿಪುರಾ, ಅಸ್ಸಾಂ, ಪಶ್ಚಿಮ ಬಂಗಾಳ, ಕರ್ನಾಟಕ, ತಮಿಳುನಾಡು, ತೆಲಂಗಾಣ, ಹರಿಯಾಣ, ಪುದುಚೇರಿ, ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ ರಾಜ್ಯಗಳಲ್ಲಿ ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ಎನ್‌ಐಎ ಶೋಧ ನಡೆಸುತ್ತಿದೆ.

ಬೆಂಗಳೂರಿನ 15 ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮೇಲೆ ದಾಳಿ: ಬೆಂಗಳೂರು ನಗರದಲ್ಲಿ 15ಕ್ಕೂ ಅಧಿಕ ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮೇಲೆ ಎನ್ ಐಎ ಇಂದು ದಾಳಿ ನಡೆಸಿದೆ. ಬೆಂಗಳೂರಿನ ಸೋಲದೇವನಹಳ್ಳಿ, ಕೆ.ಆರ್.ಪುರಂ, ಬೆಳ್ಳಂದೂರು ಸೇರಿದಂತೆ 15ಕ್ಕೂ ಅಧಿಕ ಕಡೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ.

ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶಿಯರ ಬಂಧನ: ಇದೇ ವೇಳ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಎಂಟು ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. 

ಸೋಲದೇವನಹಳ್ಳಿ, ಕೆ.ಆರ್. ಪುರ, ಬೆಳ್ಳಂದೂರು ಪ್ರದೇಶ ಸೇರಿದಂತೆ 15 ಸ್ಥಳಗಳಲ್ಲಿ ಎನ್‌ಐಎ ತಂಡ ಇಂದು ಏಕಕಾಲದಲ್ಲಿ ದಾಳಿ ನಡೆಸಿತು. ದಾಳಿಯ ಸಮಯದಲ್ಲಿ, ಭಾರತ ಗಡಿಯ ಮೂಲಕ ಅಕ್ರಮವಾಗಿ ನುಸುಳಿ ಬಂದು ಬೆಂಗಳೂರಿನಲ್ಲಿ ಹಲವು ವರ್ಷಗಳಿಂದ ತಂಗಿದ್ದ ಕನಿಷ್ಠ ಎಂಟು ಮಂದಿ ಬಾಂಗ್ಲಾದೇಶೀಯರನ್ನು ಅಧಿಕಾರಿಗಳು ಪತ್ತೆ ಮಾಡಿ ಬಂಧಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!