ಮಹುವಾ ಮೊಯಿತ್ರಾ 
ದೇಶ

ಇದು 'ಕಾಂಗರೂ ಕೋರ್ಟ್' ತೀರ್ಪು; ಸಂಸದೀಯ ಪ್ರಜಾಪ್ರಭುತ್ವದ ಕಗ್ಗೊಲೆ; ದೊಡ್ಡ ಜನಾದೇಶದೊಂದಿಗೆ ಮರಳುತ್ತೇನೆ: ಮೊಯಿತ್ರಾ

ಸದನದಲ್ಲಿ ಪ್ರಶ್ನೆ ಕೇಳಲು ಹಣ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆಯ ನೈತಿಕ ಸಮಿತಿಯು ಗುರುವಾರ ಉಚ್ಛಾಟನೆಗೆ ಶಿಫಾರಸ್ಸು ಮಾಡಿರುವ ಟಿಎಂಸಿ ಹಿರಿಯ ನಾಯಕಿ ಮಹುವಾ ಮೊಯಿತ್ರಾ, ಇದು "ಕಾಂಗರೂ ಕೋರ್ಟ್ ನಿಂದ ಪೂರ್ವ ನಿಯೋಜಿತ ಪಂದ್ಯ' ಎಂದು ಬಣ್ಣಿಸಿದ್ದಾರೆ.

ಕೋಲ್ಕತ್ತಾ: ಸದನದಲ್ಲಿ ಪ್ರಶ್ನೆ ಕೇಳಲು ಹಣ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆಯ ನೈತಿಕ ಸಮಿತಿಯು ಗುರುವಾರ ಉಚ್ಛಾಟನೆಗೆ ಶಿಫಾರಸ್ಸು ಮಾಡಿರುವ ಟಿಎಂಸಿ ಹಿರಿಯ ನಾಯಕಿ ಮಹುವಾ ಮೊಯಿತ್ರಾ, ಇದು "ಕಾಂಗರೂ ಕೋರ್ಟ್ ನಿಂದ ಪೂರ್ವ ನಿಯೋಜಿತ ಪಂದ್ಯ' ಎಂದು ಬಣ್ಣಿಸಿದ್ದಾರೆ. ಅಲ್ಲದೇ, ಇದು ಭಾರತೀಯ ಸಂಸದೀಯ ಪ್ರಜಾಪ್ರಭುತ್ವದ ಕಗ್ಗೊಲೆಯನ್ನು ಸೂಚಿಸುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ. 

ಬಿಜೆಪಿ ಸಂಸದ ವಿನೋದ್ ಕುಮಾರ್ ಸೋಂಕರ್ ಅಧ್ಯಕ್ಷತೆಯ ಸಮಿತಿಯು ಗುರುವಾರ ಮೊಯಿತ್ರಾ ಅವರನ್ನು ಉಚ್ಚಾಟಿಸುವಂತೆ ಸೂಚಿಸುವ ತನ್ನ ವರದಿಯನ್ನು ಅಂಗೀಕರಿಸಿತು. ನಂತರ ಪಿಟಿಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, "ಈ ಲೋಕಸಭೆಯಲ್ಲಿ ಅವರು ನನ್ನನ್ನು ಹೊರಹಾಕಿದರೂ, ಮುಂದಿನ ಲೋಕಸಭೆಯಲ್ಲಿ ದೊಡ್ಡ ಜನಾದೇಶದೊಂದಿಗೆ ಹಿಂತಿರುಗುತ್ತೇನೆ" ಎಂದು ಹೇಳಿದರು.

ಲೋಕಸಭೆ ನೈತಿಕ ಶಿಫಾರಸ್ಸಿನಲ್ಲಿ ಯಾವುದೇ ಆಶ್ಚರ್ಯ ಅಥವಾ ಪರಿಣಾಮವಿಲ್ಲ, ಇದು ಕಾಂಗರೂ ಕೋರ್ಟ್‌ನಿಂದ ಪೂರ್ವ ನಿಯೋಜಿತ ಪಂದ್ಯವಾಗಿದೆ. ಆದರೆ ದೇಶಕ್ಕೆ ದೊಡ್ಡ ಸಂದೇಶವೆಂದರೆ 'ಇದು ಸಂಸದೀಯ ಪ್ರಜಾಪ್ರಭುತ್ವದ ಕಗ್ಗೊಲೆ' ಎಂದು ಮೊಯಿತ್ರಾ ಹೇಳಿದರು.

ಶಿಫಾರಸನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ ಎಂದು ಸ್ಪಷ್ಟಪಡಿಸಿದ ಅವರು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಅದನ್ನು ತೆಗೆದುಕೊಳ್ಳಬೇಕು ಎಂದು ಹೇಳಿದರು. ಈ ನಿರ್ಧಾರ ಬಿಜೆಪಿ-ಅದಾನಿ ನಂಟು" ಕುರಿತು ಪ್ರಶ್ನೆ ಕೇಳುವುದು, ಮಾಹಿತಿ ಬಹಿರಂಗಪಡಿಸುವುದನ್ನು ಮುಂದುವರೆಸದಂತೆ ತಡೆಯುವುದಿಲ್ಲ ಎಂದರು. 

"ಮೊದಲನೆಯದಾಗಿ, ಇದು ಕೇವಲ ಶಿಫಾರಸು, ಸದ್ಯಕ್ಕೆ ಏನೂ ಆಗಿಲ್ಲ. ಅವರು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಅದನ್ನು ತೆಗೆದುಕೊಳ್ಳಲಿ. ಇದರಿಂದ ನಿಜವಾಗಿಯೂ ನನಗೆ ಏನನ್ನೂ ಮಾಡಲಾಗದು, ಇದರಿಂದ ನನ್ನ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ ಎಂದು ಹೇಳಿದ ಮೊಹಿತ್ರಾ, ಬಿಜೆಪಿ ವಿರುದ್ಧ ಹರಿಹಾಯ್ದರು.

ಸಂಸದೀಯ ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಹಾಸ್ಯವನ್ನು ಬಿಜೆಪಿ ಇಡೀ ದೇಶಕ್ಕೆ ತೋರಿಸಿದೆ ಎಂದು ನನಗೆ ಸಂತೋಷವಾಗಿದೆ ಎಂದರು. "ಮೊದಲು, ಅವರು ನನ್ನನ್ನು ಹೊರಹಾಕಲಿ" ನಂತರ ಮುಂದಿನ ಕ್ರಮಗಳನ್ನು ಪ್ರಕಟಿಸುವುದಾಗಿ ಮೊಹಿತ್ರಾ ತನ್ನ ಮುಂದಿನ ಕ್ರಮ ಕುರಿತು ತಿಳಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT