ಲಾರಿ- ಬಸ್ ನಡುವಿನ ಡಿಕ್ಕಿ ಚಿತ್ರ 
ದೇಶ

ಉತ್ತರ ಪ್ರದೇಶ: ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದು 6 ಜನರ ಸಾವು, 27 ಮಂದಿಗೆ ಗಾಯ

ಜಗದೀಶ್‌ಪುರ ಸಮೀಪದ ಗೋರಖ್‌ಪುರ-ಕುಶಿನಗರ ಹೆದ್ದಾರಿಯಲ್ಲಿ ವೇಗವಾಗಿ ಬಂದ ಟ್ರಕ್‌ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿದ್ದಾರೆ.

ಗೋರಖ್‌ಪುರ: ಜಗದೀಶ್‌ಪುರ ಸಮೀಪದ ಗೋರಖ್‌ಪುರ-ಕುಶಿನಗರ ಹೆದ್ದಾರಿಯಲ್ಲಿ ವೇಗವಾಗಿ ಬಂದ ಟ್ರಕ್‌ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿದ್ದಾರೆ. ಐದು ಆಂಬ್ಯುಲೆನ್ಸ್‌ಗಳ ಸಹಾಯದಿಂದ ಗಾಯಾಳುಗಳನ್ನು ಜಿಲ್ಲಾಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ. ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಇಬ್ಬರ ಗುರುತು ಇನ್ನೂ ಪತ್ತೆಯಾಗಿಲ್ಲ. ಗೋರಖ್‌ಪುರದಿಂದ ಬರುತ್ತಿದ್ದ ಬಸ್ ಪ್ರಯಾಣಿಕರೊಂದಿಗೆ ಪರೌನಾ ಕಡೆಗೆ ಹೋಗುತ್ತಿತ್ತು ಎಂಬುದು ಪ್ರಾಥಮಿಕವಾಗಿ ತಿಳಿದುಬಂದಿದೆ ಎಂದು ಕಂಟೋನ್ಮೆಂಟ್ ಪೊಲೀಸ್ ಸರ್ಕಲ್ ಆಫೀಸರ್  ಮನುಷ್ ಪರೀಕ್ ತಿಳಿಸಿದ್ದಾರೆ. 

ಜಗದೀಶ್‌ಪುರದ ಮಲ್ಲಾಪುರ ಬಳಿ ಬಸ್‌ ಟೈರ್‌ ಪಂಕ್ಚರ್‌ ಆಗಿದ್ದು, ಚಾಲಕ ರಸ್ತೆ ಬದಿಯಲ್ಲಿ ಬಸ್ ನ್ನು ನಿಲ್ಲಿಸಿದ್ದಾರೆ. ಪ್ರಯಾಣಿಕರನ್ನು ಸಾಗಿಸಲು ಕಂಡಕ್ಟರ್‌ ಮತ್ತೊಂದು ಬಸ್‌ ಗೆ ಕರೆ ಮಾಡಿದ್ದಾರೆ. ಕೆಲವು ಪ್ರಯಾಣಿಕರು ಗೋರಖ್‌ಪುರದಿಂದ ಬಂದ ಮತ್ತೊಂದು ಬಸ್‌ಗೆ ಹತ್ತಿದ್ದರೆ, ಮತ್ತೆ ಕೆಲವರು ಬಸ್‌ ಹತ್ತಲು ಇಳಿಯುತ್ತಿದ್ದರು ಮತ್ತು ಅನೇಕ ಪ್ರಯಾಣಿಕರು ಎರಡು ಬಸ್‌ಗಳ ನಡುವೆ ನಿಂತಿರುವಾಗ ವೇಗವಾಗಿ ಬಂದ ಲಾರಿಯೊಂದು ಬಸ್‌ಗೆ ಡಿಕ್ಕಿ ಹೊಡೆದಿದೆ. ಇದರ ಡಿಕ್ಕಿಯ ರಭಸಕ್ಕೆ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗೋರಖ್‌ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಗ್ರೋವರ್, ತಪ್ಪಿತಸ್ಥ ಚಾಲಕನನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ. ಡಿಕ್ಕಿ ಹೊಡೆದ ನಂತರ ಟ್ರಕ್ ಬಿಟ್ಟು ಚಾಲಕ ಬಿಟ್ಟು ಪರಾರಿಯಾಗಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT