ತೆಲಂಗಾಣ ಸಿಎಂ ಕೆಸಿಆರ್ 
ದೇಶ

ತೆಲಂಗಾಣ ಚುನಾವಣೆ: ಸಿಎಂ ಕೆಸಿಆರ್ ಬಳಿ ಸ್ವಂತ ಕಾರಿಲ್ಲ! ಆಸ್ತಿ ಮೌಲ್ಯ ಎಷ್ಟು ಗೊತ್ತೇ?

ತೆಲಂಗಾಣ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಚುನಾವಣೆಗೆ ಸ್ಪರ್ಧಿಸಿರುವ ಸಿಎಂ ಚಂದ್ರಶೇಖರ್ ರಾವ್ ತಮ್ಮ ಬಳಿ ಇರುವ ಆಸ್ತಿ ವಿವರಗಳನ್ನು ಘೋಷಣೆ ಮಾಡಿದ್ದಾರೆ.

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಚುನಾವಣೆಗೆ ಸ್ಪರ್ಧಿಸಿರುವ ಸಿಎಂ ಚಂದ್ರಶೇಖರ್ ರಾವ್ ತಮ್ಮ ಬಳಿ ಇರುವ ಆಸ್ತಿ ವಿವರಗಳನ್ನು ಘೋಷಣೆ ಮಾಡಿದ್ದಾರೆ.

ತಮ್ಮ ಬಳಿ 58.92 ಕೋಟಿ ರೂಪಾಯಿ ಆಸ್ತಿ ಇರುವುದಾಗಿ ಚಂದ್ರಶೇಖರ್ ರಾವ್ ಘೋಷಿಸಿಕೊಂಡಿದ್ದಾರೆ. ಸಿಎಂ ಆಗಿರುವ ಕೆಸಿಆರ್ ಸ್ವಂತದ ಕಾರು, ಕೃಷಿ ಭೂಮಿಯನ್ನು ಹೊಂದಿಲ್ಲ.  ಆದರೆ ಪ್ರಮಾಣಪತ್ರದಲ್ಲಿ ತಾವು ಕೃಷಿಕರು ಎಂದು ನಮೂದಿಸಿರುವುದು ವಿಚಿತ್ರವಾಗಿದೆ. 

ಗುರುವಾರ (ನವೆಂಬರ್ 9) ಬಿಆರ್‌ಎಸ್ ನಾಯಕ ಕೆಸಿಆರ್  ಗಜ್ವೆಲ್ ಮತ್ತು ಕಮ್ಮಾರೆಡ್ಡಿ ಎರಡೂ ಸ್ಥಾನಗಳಿಗೆ ನಾಮಪತ್ರ ಸಲ್ಲಿಸಿದರು.
 
2018 ರ ಚುನಾವಣೆಯಲ್ಲಿ ಕೆಸಿಆರ್ ಬಳಿ 22 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಇತ್ತು. ಈ ಹಿಂದೆಯೂ ತಮ್ಮ ಬಳಿ ಸ್ವಂತ ಕಾರು ಇಲ್ಲವೆಂದು ಘೋಷಿಸಿದ್ದರು. ಆದರೆ 2015 ರಲ್ಲಿ ಸಿಎಂ ಬೆಂಗಾವಲು ಪಡೆಯಲ್ಲಿ ನಾಲ್ಕು ಟೊಯಾಟಾ ಲ್ಯಾಂಡ್ ಕ್ರೂಸರ್ ಕಾರು ಇತ್ತು.

ತಮ್ಮದು ಹಿಂದೂ ಅವಿಭಜಿತ ಕುಟುಂಬ ಎಂದು ಘೋಷಿಸಿರುವ ಕೆಸಿಆರ್, ತಮ್ಮ ಒಟ್ಟು ಕುಟುಂಬದ ಆಸ್ತಿ 59 ಕೋಟಿ ರೂಪಾಯಿ ಎಂದು ಘೋಷಿಸಿದ್ದಾರೆ. ಅಷ್ಟೇ ಅಲ್ಲದೇ ತಮಗೆ 25 ಕೋಟಿ ರೂಪಾಯಿ ಸಾಲ ಇರುವುದಾಗಿ ತಿಳಿಸಿದ್ದಾರೆ. 

ಪ್ರಮಾಣಪತ್ರದ ಪ್ರಕಾರ, ಕೆಸಿಆರ್ ಪತ್ನಿ ಶೋಭಾ ಬಳಿ ಒಟ್ಟು 7 ಕೋಟಿ ರೂಪಾಯಿ ಚರಾಸ್ತಿ ಇದ್ದು, ಹಿಂದೂ ಅವಿಭಕ್ತ ಕುಟುಂಬದಲ್ಲಿ 9 ಕೋಟಿ ರೂಪಾಯಿಗಳಷ್ಟು ಚರಾಸ್ತಿ ಇದೆ. ಅಷ್ಟೆ ಅಲ್ಲದೇ 2.81 ಕೆ.ಜಿ ಚಿನ್ನಾಭರಣ, ವಜ್ರ ಹಾಗೂ ಇತರ ಬೆಲೆ ಬಾಳುವ ಸುಮಾರು 1.5 ಕೋಟಿ ರೂಪಾಯಿ ವಸ್ತುಗಳಿವೆ. ಇಂದಿನ ಮಾರುಕಟ್ಟೆಯ ಬೆಲೆಯಲ್ಲಿ ಕೆಸಿಆರ್ ಅವರ ಸ್ಥಿರಾಸ್ತಿಯ ಒಟ್ಟು ಮೌಲ್ಯ 8.50 ಕೋಟಿ ರೂಪಾಯಿಗಳಿಷ್ಟು ಹಿಂದೂ ಅವಿಭಜಿತ ಕುಟುಂಬದ ಹೆಸರಿನಲ್ಲಿ 15 ಕೋಟಿ ರೂಪಾಯಿಗಳಿವೆ.

ಕೆಸಿಆರ್ ಪುತ್ರ, ಬಿಆರ್ ಎಸ್ ಕಾರ್ಯಾಧ್ಯಕ್ಷ ಕೆಟಿ ರಾಮರಾವ್ ಹಾಗೂ ಅವರ ಕುಟುಂಬದ ಬಳಿ ಒಟ್ಟು 54.27 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಇರುವುದಾಗಿ ಘೋಷಿಸಿಕೊಂಡಿದ್ದಾರೆ. ಬಿಎ ಪದವೀಧರರಾಗಿರುವ ಕೆಸಿಆರ್ ವಿರುದ್ಧ 9 ಕ್ರಿಮಿನಲ್ ಕೇಸ್ ಗಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT