ವಾಘಾ ಗಡಿ 
ದೇಶ

ಪಾಕ್ ಜೈಲಿನಿಂದ ಬಿಡುಗಡೆಯಾದ 80 ಭಾರತೀಯ ಮೀನುಗಾರರು ಬಿಎಸ್ ಎಫ್ ಗೆ ಹಸ್ತಾಂತರ!

ಪಾಕಿಸ್ತಾನದ ಜೈಲಿನಿಂದ ಇತ್ತೀಚೆಗೆ ಬಿಡುಗಡೆಯಾದ 80 ಭಾರತೀಯ ಮೀನುಗಾರರನ್ನು ಅಮೃತಸರದ ಅಟ್ಟಾರಿ-ವಾಘಾ ಗಡಿಯಲ್ಲಿ ಗಡಿ ಭದ್ರತಾ ಪಡೆ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.ಕರಾಚಿಯ ಮಲಿರ್ ಜೈಲಿನಲ್ಲಿದ್ದ 80 ಭಾರತೀಯ ಮೀನುಗಾರರನ್ನು ಪಾಕಿಸ್ತಾನ ಸರ್ಕಾರ ಗುರುವಾರ ಬಿಡುಗಡೆ ಮಾಡಿತ್ತು.

ಅಮೃತಸರ: ಪಾಕಿಸ್ತಾನದ ಜೈಲಿನಿಂದ ಇತ್ತೀಚೆಗೆ ಬಿಡುಗಡೆಯಾದ 80 ಭಾರತೀಯ ಮೀನುಗಾರರನ್ನು ಅಮೃತಸರದ ಅಟ್ಟಾರಿ-ವಾಘಾ ಗಡಿಯಲ್ಲಿ ಗಡಿ ಭದ್ರತಾ ಪಡೆ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಕರಾಚಿಯ ಮಲಿರ್ ಜೈಲಿನಲ್ಲಿದ್ದ 80 ಭಾರತೀಯ ಮೀನುಗಾರರನ್ನು ಪಾಕಿಸ್ತಾನ ಸರ್ಕಾರ ಗುರುವಾರ ಬಿಡುಗಡೆ ಮಾಡಿತ್ತು.

ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ನೀಡಿದ ತುರ್ತು ಪ್ರಯಾಣ ಪ್ರಮಾಣಪತ್ರದ ಮೂಲಕ ಅಟ್ಟಾರಿ-ವಾಘಾ ಗಡಿಯ ಭೂ ಸಾರಿಗೆ ಮಾರ್ಗದ ಮೂಲಕ ಎಲ್ಲಾ ಕೈದಿಗಳು ಶುಕ್ರವಾರ ರಾತ್ರಿ ಭಾರತಕ್ಕೆ ಮರಳಿದ್ದಾರೆ ಎಂದು  ಪಂಜಾಬ್ ಪೊಲೀಸ್ ಪ್ರೋಟೋಕಾಲ್ ಅಧಿಕಾರಿ ಅರುಣ್ ಮಹಲ್ ಹೇಳಿದ್ದಾರೆ.

ನಂತರ ಅವರನ್ನು ಭಾರತೀಯ ವೈದ್ಯರ ತಂಡದಿಂದ ತಪಾಸಣೆ ನಡೆಸಲಾಯಿತು. ಮೂರು ವರ್ಷಗಳ ಹಿಂದೆ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಯಲ್ಲಿ ತೊಡಗಿದ್ದ ಅವರ ದೋಣಿಗಳು ಪಾಕಿಸ್ತಾನದ ಕಡೆಗೆ ತೆರಳಿದಾಗ ಅವರನ್ನು ಬಂಧಿಸಲಾಗಿತ್ತು. ಭಾರತಕ್ಕೆ ವಾಪಸ್ಸಾದ ನಂತರ ಭೂಮಿಗೆ ಗೌರವಾರ್ಥವಾಗಿ ನಮಸ್ಕರಿಸಿದರು ಎಂದು ಅವರು ಹೇಳಿದರು.

ಅರೇಬಿಯನ್ ಸಮುದ್ರದಲ್ಲಿನ ಕಡಲ ಗಡಿಯನ್ನು ಸರಿಯಾಗಿ ತಿಳಿಯದಕಾರಣ ಭಾರತ ಮತ್ತು ಪಾಕಿಸ್ತಾನದ ಮೀನುಗಾರರನ್ನು ಅವರ ದೋಣಿಗಳೊಂದಿಗೆ ಆಗಾಗ್ಗೆ ಬಂಧಿಸಲಾಗುತ್ತದೆ. ಅನೇಕ ಮೀನುಗಾರಿಕಾ ದೋಣಿಗಳು ತಮ್ಮ ನಿಖರವಾದ ಸ್ಥಳವನ್ನು ಕಂಡುಹಿಡಿಯಲು ಅಗತ್ಯವಾದ ತಂತ್ರಜ್ಞಾನವನ್ನು ಹೊಂದಿಲ್ಲದಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ. ಶಿವಕುಮಾರ್: ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT