ಸಾಂದರ್ಭಿಕ ಚಿತ್ರ 
ದೇಶ

ಮುಳುವಾಯ್ತು ಮಹಿಳಾ ಸಹಪಾಠಿ ಜೊತೆ ಸಲುಗೆ: ಕೈ ಬೆರಳು ಕಳೆದುಕೊಂಡ ವಿದ್ಯಾರ್ಥಿ!

ಮಹಿಳಾ ಸಹಪಾಠಿಯ  ಜತೆ ಸಲುಗೆಯಿಂದ ಮಾತನಾಡಿದ್ದಕ್ಕೆ 12ನೇ ತರಗತಿಯ ವಿದ್ಯಾರ್ಥಿಯ ಮೇಲೆ ಹಿರಿಯ ವಿದ್ಯಾರ್ಥಿಯೊಬ್ಬ ಹಲ್ಲೆ ನಡೆಸಿ, ಆತನ ಬೆರಳುಗಳನ್ನು ಕತ್ತರಿಸಿರುವ ಘಟನೆ ದೆಹಲಿಯ ದಕ್ಷಿಣ ದ್ವಾರಕದಲ್ಲಿ ನಡೆದಿದೆ.

ನವದೆಹಲಿ: ಮಹಿಳಾ ಸಹಪಾಠಿಯ  ಜತೆ ಸಲುಗೆಯಿಂದ ಮಾತನಾಡಿದ್ದಕ್ಕೆ 12ನೇ ತರಗತಿಯ ವಿದ್ಯಾರ್ಥಿಯ ಮೇಲೆ ಹಿರಿಯ ವಿದ್ಯಾರ್ಥಿಯೊಬ್ಬ ಹಲ್ಲೆ ನಡೆಸಿ, ಆತನ ಬೆರಳುಗಳನ್ನು ಕತ್ತರಿಸಿರುವ ಘಟನೆ ದೆಹಲಿಯ ದಕ್ಷಿಣ ದ್ವಾರಕದಲ್ಲಿ ನಡೆದಿದೆ.

ಆರೋ‍ಪಿ ಅದೇ ಶಾಲೆಯ ಹಿರಿಯ ವಿದ್ಯಾರ್ಥಿಯಾಗಿದ್ದು, ಈಗಾಗಲೇ ಪದವಿಯನ್ನೂ ಮುಗಿಸಿದ್ದಾನೆ.  ಅಕ್ಟೋಬರ್‌ 21 ರಂದು ಘಟನೆ ನಡೆದಿದ್ದು, ಭಯಗೊಂಡಿದ್ದ ವಿದ್ಯಾರ್ಥಿ, ಬೈಕ್‌ ಚೈನ್‌ಗೆ ಕೈ ಸಿಲುಕಿ ಬೆರಳುಗಳು ಕತ್ತರಿಸಿವೆ ಎಂದು ಪೋಷಕರಿಗೆ ಸುಳ್ಳು ಹೇಳಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಶುಕ್ರವಾರ, ನೈಜ ಘಟನೆಯ ಬಗ್ಗೆ ಪೋಷಕರಿಗೆ ವಿದ್ಯಾರ್ಥಿ ತಿಳಿಸಿದ್ದಾನೆ. ಬಳಿಕ ದಾಖಲಾದ ದೂರಿನ ಅನ್ವಯ ಎಫ್‌ಐಆರ್‌ ದಾಖಲಿಸಲಾಗಿದೆ. ಆರೋಪಿಯು ನನ್ನನ್ನು ಶಾಲೆಯ ಹೊರಗಡೆ ಭೇಟಿಯಾಗಿ ಪಾರ್ಕ್‌ಗೆ ಕರೆದುಕೊಂಡು ಹೋಗಿದ್ದ.

ಈ ವೇಳೆ ಮಹಿಳಾ ಸಹಪಾಠಿ ಜತೆಗಿನ ಸ್ನೇಹದ ಬಗ್ಗೆ ತಕರಾರು ಎತ್ತಿ, ಕಲ್ಲಿನಿಂದ ಹಲ್ಲೆ ಮಾಡಿದ್ದಎಂದು ಹಲ್ಲೆಗೊಳಗಾದ ವಿದ್ಯಾರ್ಥಿ ಪೊಲೀಸರ ಬಳಿ ಹೇಳಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT