ಸಾಂದರ್ಭಿಕ ಚಿತ್ರ 
ದೇಶ

ಮುಳುವಾಯ್ತು ಮಹಿಳಾ ಸಹಪಾಠಿ ಜೊತೆ ಸಲುಗೆ: ಕೈ ಬೆರಳು ಕಳೆದುಕೊಂಡ ವಿದ್ಯಾರ್ಥಿ!

ಮಹಿಳಾ ಸಹಪಾಠಿಯ  ಜತೆ ಸಲುಗೆಯಿಂದ ಮಾತನಾಡಿದ್ದಕ್ಕೆ 12ನೇ ತರಗತಿಯ ವಿದ್ಯಾರ್ಥಿಯ ಮೇಲೆ ಹಿರಿಯ ವಿದ್ಯಾರ್ಥಿಯೊಬ್ಬ ಹಲ್ಲೆ ನಡೆಸಿ, ಆತನ ಬೆರಳುಗಳನ್ನು ಕತ್ತರಿಸಿರುವ ಘಟನೆ ದೆಹಲಿಯ ದಕ್ಷಿಣ ದ್ವಾರಕದಲ್ಲಿ ನಡೆದಿದೆ.

ನವದೆಹಲಿ: ಮಹಿಳಾ ಸಹಪಾಠಿಯ  ಜತೆ ಸಲುಗೆಯಿಂದ ಮಾತನಾಡಿದ್ದಕ್ಕೆ 12ನೇ ತರಗತಿಯ ವಿದ್ಯಾರ್ಥಿಯ ಮೇಲೆ ಹಿರಿಯ ವಿದ್ಯಾರ್ಥಿಯೊಬ್ಬ ಹಲ್ಲೆ ನಡೆಸಿ, ಆತನ ಬೆರಳುಗಳನ್ನು ಕತ್ತರಿಸಿರುವ ಘಟನೆ ದೆಹಲಿಯ ದಕ್ಷಿಣ ದ್ವಾರಕದಲ್ಲಿ ನಡೆದಿದೆ.

ಆರೋ‍ಪಿ ಅದೇ ಶಾಲೆಯ ಹಿರಿಯ ವಿದ್ಯಾರ್ಥಿಯಾಗಿದ್ದು, ಈಗಾಗಲೇ ಪದವಿಯನ್ನೂ ಮುಗಿಸಿದ್ದಾನೆ.  ಅಕ್ಟೋಬರ್‌ 21 ರಂದು ಘಟನೆ ನಡೆದಿದ್ದು, ಭಯಗೊಂಡಿದ್ದ ವಿದ್ಯಾರ್ಥಿ, ಬೈಕ್‌ ಚೈನ್‌ಗೆ ಕೈ ಸಿಲುಕಿ ಬೆರಳುಗಳು ಕತ್ತರಿಸಿವೆ ಎಂದು ಪೋಷಕರಿಗೆ ಸುಳ್ಳು ಹೇಳಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಶುಕ್ರವಾರ, ನೈಜ ಘಟನೆಯ ಬಗ್ಗೆ ಪೋಷಕರಿಗೆ ವಿದ್ಯಾರ್ಥಿ ತಿಳಿಸಿದ್ದಾನೆ. ಬಳಿಕ ದಾಖಲಾದ ದೂರಿನ ಅನ್ವಯ ಎಫ್‌ಐಆರ್‌ ದಾಖಲಿಸಲಾಗಿದೆ. ಆರೋಪಿಯು ನನ್ನನ್ನು ಶಾಲೆಯ ಹೊರಗಡೆ ಭೇಟಿಯಾಗಿ ಪಾರ್ಕ್‌ಗೆ ಕರೆದುಕೊಂಡು ಹೋಗಿದ್ದ.

ಈ ವೇಳೆ ಮಹಿಳಾ ಸಹಪಾಠಿ ಜತೆಗಿನ ಸ್ನೇಹದ ಬಗ್ಗೆ ತಕರಾರು ಎತ್ತಿ, ಕಲ್ಲಿನಿಂದ ಹಲ್ಲೆ ಮಾಡಿದ್ದಎಂದು ಹಲ್ಲೆಗೊಳಗಾದ ವಿದ್ಯಾರ್ಥಿ ಪೊಲೀಸರ ಬಳಿ ಹೇಳಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT