ಬಿಆರ್ ಎಸ್ ಶಾಸಕ ಆಸ್ಪತ್ರೆಗೆ ರವಾನೆ ಚಿತ್ರ 
ದೇಶ

ಕಾಂಗ್ರೆಸ್, ಬಿಆರ್‌ಎಸ್ ಕಾರ್ಯಕರ್ತರ ನಡುವೆ ಘರ್ಷಣೆ: ಬಿಆರ್‌ಎಸ್ ಶಾಸಕ ಆಸ್ಪತ್ರೆಗೆ ದಾಖಲು

ತೆಲಂಗಾಣ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಂತೆಯೇ, ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆಯುತ್ತಿದೆ.

ನಾಗರಕರ್ನೂಲ್: ತೆಲಂಗಾಣ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಂತೆಯೇ, ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆಯುತ್ತಿದೆ. 

ನಾಗರಕರ್ನೂಲ್ ಜಿಲ್ಲೆಯ ಅಚಂಪೇಟೆ ಪಟ್ಟಣದಲ್ಲಿ ಶನಿವಾರ ರಾತ್ರಿ 11 ಗಂಟೆಯಲ್ಲಿ ನಡೆದ ಘರ್ಷಣೆಯಲ್ಲಿ ಆಡಳಿತ ಪಕ್ಷದ ಶಾಸಕ ಗುವ್ವಲ ಬಾಲರಾಜು ಗಾಯಗೊಂಡಿದ್ದಾರೆ ಮತ್ತು ಇತರರೊಂದಿಗೆ ಹೈದರಾಬಾದ್‌ನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಶಾಸಕರು ಮತದಾರರಿಗೆ ಹಣ ಹಂಚುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಶಂಕಿಸಿದ್ದಾರೆ. ಇದು ಮಾತಿನ ಚಕಮಕಿಗೆ ಕಾರಣವಾಗಿದ್ದು, ಘರ್ಷಣೆ ಉಂಟಾಗಿದೆ. ಕೆಲವು ಕಾಂಗ್ರೆಸ್ ಮುಖಂಡರು ಶಾಸಕರ ಮೇಲೆ ಹಲ್ಲೆಗೆ ಯತ್ನಿಸಿದರು ಎಂದು ಅಚ್ಚಂಪೇಟೆಯ ವೃತ್ತ ನಿರೀಕ್ಷಕ ಅನುದೀಪ್ ಹೇಳಿದ್ದಾರೆ. 

ಇನ್ನು ಪ್ರಕರಣ ದಾಖಲಿಸಿಕೊಳ್ಳಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ಸಂಜೆ ಪ್ರಚಾರ ಮುಗಿಸಿ ಅಚಂಪೇಟೆ ಪಟ್ಟಣಕ್ಕೆ ಆಗಮಿಸಿದ್ದ ಹಾಲಿ ಬಿಆರ್‌ಎಸ್‌ ಶಾಸಕರ ಮೇಲೆ ಕೆಲ ಕಾಂಗ್ರೆಸ್‌ ಮುಖಂಡರು ಅಡ್ಡಿಪಡಿಸಿ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT