ದೇಶ

ಯಮುನೋತ್ರಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ, 40 ಕಾರ್ಮಿಕರು ಸಿಲುಕಿರುವ ಶಂಕೆ

Manjula VN

ಉತ್ತರಕಾಶಿ: ಉತ್ತರಕಾಶಿಯ ಬ್ರಹ್ಮಖಾಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಲ್ಕ್ಯಾರಾ ಮತ್ತು ದಾಂಡಲ್‌ಗಾಂವ್ ನಡುವೆ ನಿರ್ಮಾಣ ಹಂತದ ಸುರಂಗ ಕುಸಿತಗೊಂಡಿದ್ದು, ಸುಮಾರು 40 ಮಂದಿ ಕಾರ್ಮಿಕರು ಸಿಲುಕಿಗೊಂಡಿರುವ ಶಂಕೆಗಳು ವ್ಯಕ್ತವಾಗಿವೆ.

ಭಾನುವಾರ ಬೆಳಗ್ಗೆ 5.30ರ ಸುಮಾರಿಗೆ ಅವಘಡ ಸಂಭವಿಸಿದೆ. ಸಿಲ್ಕ್ಯಾರಾ-ದಂಡಲ್ವಾಲ್ ಸುರಂಗದ ಮುಂಭಾಗದ ಭಾಗವು ಮುರಿದುಹೋಗಿದೆ ಎಂದು ವರದಿಗಳು ತಿಳಿಸಿವೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಉನ್ನತ ಪೊಲೀಸ್ ಮತ್ತು ಆಡಳಿತಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಎನ್​ಡಿಆರ್​ಎಫ್ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಎಲ್ಲಾ ಕಾರ್ಮಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ.

ಘಟನೆಯಲ್ಲಿ ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಜೆಸಿಬಿ ಸಹಾಯದಿಂದ ಅವಶೇಷಗಳನ್ನು ತೆಗೆಯಲಾಗುತ್ತಿದೆ.

ಸ್ಥಳದಲ್ಲಿ ಸುಮಾರು 2700 ಮೀಟರ್ ವ್ಯಾಪ್ತಿಯಲ್ಲಿ 40 ರಿಂದ 50 ಕೂಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಕೆಲಸದ ಸ್ಥಳಕ್ಕೆ ಆಮ್ಲಜನಕ ಪೂರೈಸಲು ಹಾಕಿದ್ದ ಲೈನ್ ಕೂಡ ಅವಶೇಷಗಳಿಂದ ನಾಶವಾಗಿದೆ. ಆದರೆ, ಒಳಗೆ ಸಾಕಷ್ಟು ನೀರು ಮತ್ತು ಆಮ್ಲಜನಕ ಲಭ್ಯವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

SCROLL FOR NEXT