ಕಟ್ಟಡದಲ್ಲಿ ಸಿಲುಕಿದ್ದ ಮಗುವನ್ನು ರಕ್ಷಣೆ ಮಾಡುತ್ತಿರುವುದು. 
ದೇಶ

ಹೈದರಾಬಾದ್: ರಾಸಾಯನಿಕ ಗೋದಾಮಿನಲ್ಲಿ ಅಗ್ನಿ ಅವಘಡ, 9 ಮಂದಿ ಸಜೀವ ದಹನ

ಹೈದಾರಾಬಾದ್'ನಲ್ಲಿ ದೀಪಾವಳಿ ಹಬ್ಬದಂದೇ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ 9 ಮಂದಿ ಸಜೀವ ದಹನಗೊಂಡಿದ್ದಾರೆ.

ಹೈದರಾಬಾದ್​(ತೆಲಂಗಾಣ): ಹೈದಾರಾಬಾದ್'ನಲ್ಲಿ ದೀಪಾವಳಿ ಹಬ್ಬದಂದೇ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ 9 ಮಂದಿ ಸಜೀವ ದಹನಗೊಂಡಿದ್ದಾರೆ.

ನಾಂಪಲ್ಲಿ ಬಜಾರ್ ಘಾಟ್‌ನಲ್ಲಿ ನಾಲ್ಕು ಅಂತಸ್ತಿನ ರಾಸಾಯನಿಕ ಗೋದಾಮಿನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಸ್ಥಳದಲ್ಲಿ 16 ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ಮೂವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

'ಕಟ್ಟಡದ ನೆಲಮಹಡಿಯಲ್ಲಿ ಕಾರ್‌ ರಿಪೇರಿ ಮಾಡಲಾಗುತ್ತಿತ್ತು. ಈ ವೇಳೆ ಅಲ್ಲೇ ಇದ್ದ ರಾಸಾಯನಿಕ ತುಂಬಿದ್ದ ಡ್ರಮ್‌ಗಳಿಗೆ ಬೆಂಕಿ ತಗುಲಿ ಬೆಳಿಗ್ಗೆ 9.30ರ ಸುಮಾರಿಗೆ ಅವಘಡ ಸಂಭವಿಸಿದೆ. ಕೆಲ ಹೊತ್ತಿನಲ್ಲೇ ಉಳಿದ ಮಹಡಿಗಳಿಗೂ ಬೆಂಕಿ ವ್ಯಾಪಿಸಿದೆ' ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಗ್ನಿ ಅವಘಡದಲ್ಲಿ ಗೋದಾಮಿನಲ್ಲಿದ್ದ ಕಾರು ಹಾಗೂ ಎರಡು ಸೈಕಲ್ ಸುಟ್ಟು ಕರಕಲಾಗಿವೆ. ಸ್ಥಳದಲ್ಲಿ ಬೆಂಕಿ ನಂದಿಸುವ ಹಾಗೂ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT