ಅಯೋಧ್ಯೆಯ ರಾಮಮಂದಿರ 
ದೇಶ

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ವಿಹೆಚ್ ಪಿಯಿಂದ 10 ಕೋಟಿ ಕುಟುಂಬಗಳಿಗೆ ಆಹ್ವಾನ

ಅಯೋಧ್ಯೆಯ ರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ವಿಶ್ವ ಹಿಂದೂ ಪರಿಷತ್ 10 ಕೋಟಿ ಕುಟುಂಬಗಳಿಗೆ ಆಹ್ವಾನ ನೀಡುವುದಾಗಿ ಹೇಳಿದೆ. 

ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ವಿಶ್ವ ಹಿಂದೂ ಪರಿಷತ್ 10 ಕೋಟಿ ಕುಟುಂಬಗಳಿಗೆ ಆಹ್ವಾನ ನೀಡುವುದಾಗಿ ಹೇಳಿದೆ. 

ಜ.22 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ. 

ನವದೆಹಲಿಯಲ್ಲಿ ನ.12 ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ವಿಹೆಚ್ ಪಿ ಕೇಂದ್ರ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್, ಅಕ್ಷತೆಯನ್ನೊಳಗೊಂಡ ಕಳಶ ಈಗಾಗಲೇ ದೇಶಾದ್ಯಂತ ತಲುಪಿಸಲಾಗುತ್ತಿದೆ. 

ವಿಶ್ವಹಿಂದೂ ಪರಿಷತ್ ನ ಕಾರ್ಯಕರ್ತರು, ಹಿಂದೂ ಸಂಘಟನೆಗಳ ಕಾರ್ಯಕರ್ತರು ಜ.1 ರಿಂದ ಜ.15 ವರೆಗೆ ದೇಶದ ಗ್ರಾಮ, ನಗರಗಳಿಗೆ ತೆರಳಿ ಹಿಂದೂ ಕುಟುಂಬಗಳಿಗೆ ಆಹ್ವಾನ ನೀಡಲಿದ್ದಾರೆ ಎಂದು ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ. 

ವಿದೇಶಗಳಲ್ಲಿರುವ ಹಿಂದೂ ಕುಟುಂಬಗಳಿಗೆ ಆಹ್ವಾನ ನೀಡುವುದಕ್ಕಾಗಿ ಇದೇ ಮಾದರಿಯ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT