ಸಂಗ್ರಹ ಚಿತ್ರ 
ದೇಶ

Earthquake Strikes: ಹಿಂದೂ ಮಹಾಸಾಗರದಲ್ಲಿ 6.2 ತೀವ್ರತೆಯ ಭೂಕಂಪನ: ಸುನಾಮಿ ಅಪಾಯ ತಳ್ಳಿಹಾಕಿದ ವಿಜ್ಞಾನಿಗಳು!

ಇಂದು ಮಧ್ಯಾಹ್ನ 12.31ರ ಸುಮಾರಿಗೆ ಹಿಂದೂ ಮಹಾಸಾಗರದಲ್ಲಿ 10 ಕಿಮೀ ಆಳದಲ್ಲಿ 6.2 ತೀವ್ರತೆಯ ಭೂಕಂಪನ ಸಂಭವಿಸಿದೆ. ಭೂಕಂಪನವು ಶ್ರೀಲಂಕಾದ ಕೊಲಂಬೊದಿಂದ ಆಗ್ನೇಯಕ್ಕೆ 1,326 ಕಿಮೀ ದೂರದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಮಂಗಳವಾರ ಮಧ್ಯಾಹ್ನ ತಿಳಿಸಿದೆ.

ಚೆನ್ನೈ: ಇಂದು ಮಧ್ಯಾಹ್ನ 12.31ರ ಸುಮಾರಿಗೆ ಹಿಂದೂ ಮಹಾಸಾಗರದಲ್ಲಿ 10 ಕಿಮೀ ಆಳದಲ್ಲಿ 6.2 ತೀವ್ರತೆಯ ಭೂಕಂಪನ ಸಂಭವಿಸಿದೆ. ಭೂಕಂಪನವು ಶ್ರೀಲಂಕಾದ ಕೊಲಂಬೊದಿಂದ ಆಗ್ನೇಯಕ್ಕೆ 1,326 ಕಿಮೀ ದೂರದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಮಂಗಳವಾರ ಮಧ್ಯಾಹ್ನ ತಿಳಿಸಿದೆ.

ಆದಾಗ್ಯೂ, ಭಾರತೀಯ ಸುನಾಮಿ ಮುನ್ಸೂಚನಾ ಸಂಸ್ಥೆ (ITEWC) ನಿರ್ವಹಿಸುವ ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಸೇವೆಗಳ (INCOIS) ವಿಜ್ಞಾನಿಗಳು ಸುನಾಮಿಯ ಅಪಾಯವನ್ನು ತಳ್ಳಿಹಾಕಿದ್ದಾರೆ.

INCOIS ನಲ್ಲಿನ ಓಶಿಯನ್ ಮಾಡೆಲಿಂಗ್, ಅಪ್ಲೈಡ್ ರಿಸರ್ಚ್ ಅಂಡ್ ಸರ್ವಿಸಸ್ (OMARS) ಗ್ರೂಪ್ ಡೈರೆಕ್ಟರ್ ಟಿಎಮ್ ಬಾಲಕೃಷ್ಣನ್ ನಾಯರ್ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಮಾಹಿತಿ ನೀಡಿದ್ದಾರೆ. ಸುನಾಮಿ ಸಂಭವಿಸಬೇಕಾದರೆ ಭೂಕಂಪದ ತೀವ್ರತೆಯು 6.5 ಅಥವಾ ಅದಕ್ಕಿಂತ ಹೆಚ್ಚಿನದಾಗಿರಬೇಕು ಮತ್ತು ಆಳವು 10 ಕಿಮೀ ಗಿಂತ ಕಡಿಮೆಯಿರಬೇಕು. ಆದ್ದರಿಂದ, ಪ್ರಸ್ತುತ ಸನ್ನಿವೇಶದಲ್ಲಿ, ಸುನಾಮಿಯ ಯಾವುದೇ ಸಾಧ್ಯತೆಯಿಲ್ಲ. ಮೇಲಾಗಿ, ಈ ಭೂಕಂಪವು ಸ್ಟ್ರೈಕ್-ಸ್ಲಿಪ್ ಫಾಲ್ಟ್ ಎಂದು ಕರೆಯಲ್ಪಡುವ ಸ್ಥಳದಲ್ಲಿ ಸಂಭವಿಸಿದೆ. ಅಲ್ಲಿ ಟೆಕ್ಟೋನಿಕ್ ಪ್ಲೇಟ್‌ಗಳ ಭಾಗಗಳು ಒಂದಕ್ಕೊಂದು ಸಂಘರ್ಷ ನಡೆಸುವ ಸಂಭವವಿಲ್ಲ ಎಂದು ಹೇಳಿದ್ದಾರೆ.

ಹಿಂದೂ ಮಹಾಸಾಗರದ ಭೂಕಂಪದ ಬಗ್ಗೆ ತಿಳಿಯಲು ತಮಿಳುನಾಡಿನ ತಿರುಚೆಂದೂರ್ ದೇವಸ್ಥಾನದಿಂದ ತನಗೆ ಕರೆ ಬಂದಿದೆ ಎಂದು ನಾಯರ್ ಹೇಳಿದರು. ದೇವಸ್ಥಾನದಿಂದ ನನಗೆ ಕರೆ ಬಂದಿತ್ತು. ಅಲ್ಲಿ ಕೆಲವು ಉತ್ಸವಗಳು ನಡೆಯುತ್ತಿವೆ. ಸುಮಾರು 30,000 ಜನರು ಸೇರಿದ್ದರು. ಯಾವುದೇ ಅಪಾಯವಿಲ್ಲ ಎಂದು ನಾನು ತಿಳಿಸಿದ್ದೇನೆ. ತಿರುಚೆಂದೂರು ದೇವಸ್ಥಾನದಲ್ಲಿ ಪ್ರಸಿದ್ಧವಾದ 'ಕಂದ ಷಷ್ಠಿ' ಉತ್ಸವವು ಆರಂಭವಾಗಿದ್ದು, ತೂತುಕುಡಿ ಜಿಲ್ಲೆಯ ಕರಾವಳಿ ಪಟ್ಟಣದಲ್ಲಿ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ.

2004ರ ಡಿಸೆಂಬರ್ 26ರಂದು ಇಂಡೋನೇಷ್ಯಾದ ಸುಮಾತ್ರಾ ದ್ವೀಪದ ಕರಾವಳಿಯಲ್ಲಿ 9.1 ತೀವ್ರತೆಯ ಭೂಕಂಪವು ದಾಖಲಾದ ಇತಿಹಾಸದಲ್ಲಿ ಅತಿದೊಡ್ಡ ನೈಸರ್ಗಿಕ ವಿಪತ್ತುಗಳಲ್ಲಿ ಒಂದಾಗಿದೆ. ಅಂದು ಸಂಭವಿಸಿದ ಸುನಾಮಿಯಲ್ಲಿ ಭಾರತ ಮತ್ತು ಇತರ ದೇಶಗಳು ಜೀವ ಮತ್ತು ಆಸ್ತಿ ನಷ್ಟವನ್ನು ಅನುಭವಿಸಿದವು. ಇದರ ನಂತರ, ಭಾರತ ಸರ್ಕಾರವು ಭೂ ವಿಜ್ಞಾನ ಸಚಿವಾಲಯದ ಅಡಿಯಲ್ಲಿ ಹೈದರಾಬಾದ್‌ನ INCOIS ನಲ್ಲಿ ಭಾರತೀಯ ಸುನಾಮಿ ಮುನ್ಸೂಚನಾ ಸಂಸ್ಥೆ ಸ್ಥಾಪಿಸಿತು. ಇದು 2007ರ ಅಕ್ಟೋಬರ್ ನಿಂದ ಕಾರ್ಯನಿರ್ವಹಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT