ಸಾಂದರ್ಭಿಕ ಚಿತ್ರ 
ದೇಶ

ಗೋವಾ: ವಾಹನ ಕಳ್ಳತನ ಪ್ರಕರಣ ಸಂಬಂಧ ರಾಷ್ಟ್ರೀಯ ಮಟ್ಟದ ಸ್ನೂಕರ್ ಆಟಗಾರನ ಬಂಧನ!

ಕಳ್ಳತನ ಸೇರಿದಂತೆ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಟ್ಟದ ಸ್ನೂಕರ್ ಆಟಗಾರ ಸೇರಿದಂತೆ ಇಬ್ಬರನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ. ಈ ಇಬ್ಬರು ಆರೋಪಿಗಳು ಕಳ್ಳತನ ಮತ್ತು ದ್ವಿಚಕ್ರ ವಾಹನ ಕಳ್ಳತನದಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಣಜಿ: ಕಳ್ಳತನ ಸೇರಿದಂತೆ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಟ್ಟದ ಸ್ನೂಕರ್ ಆಟಗಾರ ಸೇರಿದಂತೆ ಇಬ್ಬರನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ. ಈ ಇಬ್ಬರು ಆರೋಪಿಗಳು ಕಳ್ಳತನ ಮತ್ತು ದ್ವಿಚಕ್ರ ವಾಹನ ಕಳ್ಳತನದಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರ ಮಟ್ಟದ ಸ್ನೂಕರ್ ಆಟಗಾರನ ಬಂಧನ
ಮಾಹಿತಿ ಪ್ರಕಾರ, ಸ್ನೂಕರ್ ಆಟಗಾರ ಇತ್ತೀಚೆಗೆ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಸ್ನೂಕರ್ ಆಟಗಾರ ಸುಲೇಮಾನ್ ಶೇಖ್ ಮತ್ತು ಅವರ ಪಾಲುದಾರ ಶಬ್ಬೀರ್ಸಾಹೇಬ್ ಶಲವಾದಿ ಅವರನ್ನು ಅವರ ಮನೆಯಿಂದ ಬಂಧಿಸಲಾಗಿದೆ. ಮನೆಗಳಿಗೆ ನುಗ್ಗಿ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪ ಇವರ ಮೇಲಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಉತ್ತರ ಗೋವಾ) ನಿಧಿನ್ ವಲ್ಸನ್ ತಿಳಿಸಿದ್ದಾರೆ.

ಗೋವಾವನ್ನು ಪ್ರತಿನಿಧಿಸಿದ್ದ ಸುಲೇಮಾನ್ ಶೇಖ್
2023ರ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಸುಲೇಮಾನ್ ಶೇಖ್ ಗೋವಾವನ್ನು ಪ್ರತಿನಿಧಿಸಿದ್ದರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಅವರಿಬ್ಬರೂ ಕ್ಯಾಸಿನೋ ವ್ಯಸನಿಗಳಾಗಿದ್ದು, ಈ ಕಾರಣದಿಂದಾಗಿ ಅವರು ಅಪರಾಧವನ್ನು ಆರಿಸಿಕೊಂಡರು ಎಂದು ಅವರು ಹೇಳಿದರು.

ಮಾಹಿತಿ ಪ್ರಕಾರ ಆರೋಪಿಗಳ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ಆರೋಪಿಗಳ ವಿರುದ್ಧ ಉತ್ತರ ಗೋವಾದ ಪೊರ್ವೊರಿಮ್‌ನಲ್ಲಿ ಎರಡು, ಮಾಪುಸಾ ಮತ್ತು ಮರ್ಡೋಲ್‌ನಲ್ಲಿ ತಲಾ ಒಂದು ಮತ್ತು ದಕ್ಷಿಣ ಗೋವಾದ ಮರ್ಗೋವಾದಲ್ಲಿ ಮೋಟಾರ್‌ಸೈಕಲ್ ಕಳ್ಳತನ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯಿಂದ ಚಿನ್ನ ವಶ
ಆರೋಪಿಗಳಿಂದ 17 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಹಿಡಿಯಲು ಕನಿಷ್ಠ 50 ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದ್ದು, ನಂತರ ಆರೋಪಿಗಳನ್ನು ಪತ್ತೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?