ಸಂಗ್ರಹ ಚಿತ್ರ 
ದೇಶ

ಉತ್ತರಕಾಶಿ: ಸುರಂಗ ಮಾರ್ಗ ಕುಸಿತಗೊಂಡ ಸ್ಥಳದಲ್ಲಿ ಮತ್ತೆ ಭೂ ಕುಸಿತ, ಕಾರ್ಯಾಚರಣೆಗೆ ತಡೆ

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರಾ-ಬರ್ಕೋಟ್ ಬಳಿ ಸುರಂಗ ಕುಸಿದು 40 ಮಂದಿ ಕಾರ್ಮಿಕರು ಸಿಲುಕಿದ್ದು, ಅವರ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿರುವ ನಡುವಲ್ಲೇ ಮತ್ತೆ ಅದೇ ಅದೇ ಸ್ಥಳದಲ್ಲಿ ಭೂಕುಸಿತ ಸಂಭವಿಸಿದೆ.

ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರಾ-ಬರ್ಕೋಟ್ ಬಳಿ ಸುರಂಗ ಕುಸಿದು 40 ಮಂದಿ ಕಾರ್ಮಿಕರು ಸಿಲುಕಿದ್ದು, ಅವರ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿರುವ ನಡುವಲ್ಲೇ ಮತ್ತೆ ಅದೇ ಅದೇ ಸ್ಥಳದಲ್ಲಿ ಭೂಕುಸಿತ ಸಂಭವಿಸಿದೆ.

ಭೂ ಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ಕಾರ್ಯಾಚರಣೆಗೆ ಮತ್ತೆ ಅಡ್ಡಿ ಉಂಟಾಗಿದೆ, ಕಾರ್ಯಾಚರಣೆ ನಡೆಸುತ್ತಿರುವ ಸ್ಥಳದಲ್ಲೇ ಭೂ ಕುಸಿತ ಸಂಭವಿಸುತ್ತಿರುವುದರಿಂದ ಕಾರ್ಯಾಚರಣೆಗೆ ತೊಡಕಾಗಿದೆ.

ಕಾರ್ಮಿಕರನ್ನು ರಕ್ಷಣೆ ಮಾಡಲು ಮಂಗಳವಾರ ರಾತ್ರಿ ಪೈಪ್ ಲೈನ್ ಅಳವಡಿಸಲು ಕಾರ್ಯಾಚರಣೆ ನಡೆಸುತ್ತಿರುವ ವೇಳೆ ಭೂ ಕುಸಿತ ಉಂಟಾಗಿದ್ದು, ಇದರಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದ ಸಿಬ್ಬಂದಿಗಳು ಪ್ರಾಣ ಉಳಿಸಿಕೊಳ್ಳಲು ಸುರಂಗದ ಒಳಗಿನಿಂದ ಓಡಿ ಬಂದಿದ್ದಾರೆ. ಈ ವೇಳೆ ಕಾಲ್ತುಳಿತ ಉಂಟಾಗಿ ಇಬ್ಬರು ಸಿಬ್ಬಂದಿಗಳು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT