ಹೈದ್ರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ ಮಾಜಿ ಸಂಸದೆ ಹಾಗೂ ಹಿರಿಯ ನಟಿ ವಿಜಯಶಾಂತಿ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಶುಕ್ರವಾರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:500 ರು. ಗೆ ಗ್ಯಾಸ್ ಸಿಲಿಂಡರ್; ಅತ್ತೆಗೆ 4 ಸಾವಿರ, ಸೊಸೆಗೆ ಎರಡೂವರೆ ಸಾವಿರ: ಆರು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್
ಇತ್ತೀಚಿನ ದಿನಗಳಲ್ಲಿ ಬಿಜೆಪಿಯ ಯಾವುದೇ ಕಾರ್ಯಕ್ರಮಗಳಲ್ಲಿ ಅವರು ಸಕ್ರಿಯವಾಗಿ ಭಾಗವಹಿಸುತ್ತಿರಲಿಲ್ಲ. 2009ರಲ್ಲಿ ತನ್ನ ರಾಜಕೀಯ ವೃತ್ತಿಜೀವನ ಆರಂಭಿಸಿದ ನಟಿ- ರಾಜಕಾರಣಿ ಬಿಆರ್ ಎಸ್ ಟಿಕೆಟ್ ನಿಂದ ಮೇದಕ್ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿದ್ದರು.
ನಂತರ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರೊಂದಿಗಿನ ಭಿನ್ನಾಭಿಪ್ರಾಯದಿಂದ ಅವರು ಕಾಂಗ್ರೆಸ್ ಸೇರಿ ಅದೇ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದ ವಿಜಯಶಾಂತಿ 2020 ರಲ್ಲಿ ಬಿಜೆಪಿ ಸೇರಿದ್ದರು.