ಸಾಂದರ್ಭಿಕ ಚಿತ್ರ 
ದೇಶ

ತಮಿಳುನಾಡು: ಕಾರಿಗೆ ಟ್ರಕ್ ಡಿಕ್ಕಿ; ಮದುವೆ ಮುಗಿಸಿ ವಾಪಸಾಗುತ್ತಿದ್ದ ಐವರು ದಾರುಣ ಸಾವು

ಪೆಟ್ರೋಲ್ ಟ್ಯಾಂಕರ್ ಟ್ರಕ್‌- ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ. ತಮಿಳುನಾಡಿನ ತಿರುಪ್ಪುರ ಜಿಲ್ಲೆಯ ಧಾರಾಪುರಂ-ಪಳನಿ ರಸ್ತೆಯಲ್ಲಿ ಗುರುವಾರ ತಡರಾತ್ರಿ ಈ ಅವಘಡ ಸಂಭವಿಸಿದೆ.

ಕೊಯಮತ್ತೂರು: ಪೆಟ್ರೋಲ್ ಟ್ಯಾಂಕರ್ ಟ್ರಕ್‌- ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ. ತಮಿಳುನಾಡಿನ ತಿರುಪ್ಪುರ ಜಿಲ್ಲೆಯ ಧಾರಾಪುರಂ-ಪಳನಿ ರಸ್ತೆಯಲ್ಲಿ ಗುರುವಾರ ತಡರಾತ್ರಿ ಈ ಅವಘಡ ಸಂಭವಿಸಿದೆ.

ಮೃತರನ್ನು ತಮಿಳುಮಣಿ (51), ಚಿತ್ರಾ (49), ಸೆಲ್ವರಾಣಿ (70), ಬಾಲಕೃಷ್ಣನ್ (78), ಮತ್ತು ಕಲಾರಾಣಿ (50) ಎಂದು ಗುರುತಿಸಲಾಗಿದೆ. ಇವರೆಲ್ಲರೂ ದಿಂಡಿಗಲ್ ಜಿಲ್ಲೆಯ ಪಳನಿಯಲ್ಲಿ ನಡೆದ ಮದುವೆ ಕಾರ್ಯಕ್ರಮ ಮುಗಿಸಿ ವಾಪಸ್‌ ಆಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳುಮಣಿ ಕಾರು ಚಲಾಯಿಸುತ್ತಿದ್ದರು. ಧಾರಾಪುರಂ-ಪಳನಿ ರಸ್ತೆಯ ಮಣಕ್ಕಡವು-ಆಲಂಕಾಡು ಬಸ್ ನಿಲ್ದಾಣದ ಬಳಿ ಬಂದಾಗ ವಾಹನ ನಿಯಂತ್ರಣ ತಪ್ಪಿದೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ತಮಿಳುಮಣಿ, ‌ಚಿತ್ರಾ, ಬಾಲಕೃಷ್ಣನ್ ಮತ್ತು ಸೆಲ್ವರಾಣಿ ಸ್ಥಳದಲ್ಲೇ ಮೃತಪಟ್ಟರೆ, ಕಲಾರಾಣಿ ಅವರನ್ನು ಧಾರಾಪುರಂ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನೆ ಸಂಬಂಧ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರು. ಪರಿಹಾರ ಘೋಷಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT