ಸಾಂದರ್ಭಿಕ ಚಿತ್ರ 
ದೇಶ

ತಮಿಳುನಾಡು: ಕಾರಿಗೆ ಟ್ರಕ್ ಡಿಕ್ಕಿ; ಮದುವೆ ಮುಗಿಸಿ ವಾಪಸಾಗುತ್ತಿದ್ದ ಐವರು ದಾರುಣ ಸಾವು

ಪೆಟ್ರೋಲ್ ಟ್ಯಾಂಕರ್ ಟ್ರಕ್‌- ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ. ತಮಿಳುನಾಡಿನ ತಿರುಪ್ಪುರ ಜಿಲ್ಲೆಯ ಧಾರಾಪುರಂ-ಪಳನಿ ರಸ್ತೆಯಲ್ಲಿ ಗುರುವಾರ ತಡರಾತ್ರಿ ಈ ಅವಘಡ ಸಂಭವಿಸಿದೆ.

ಕೊಯಮತ್ತೂರು: ಪೆಟ್ರೋಲ್ ಟ್ಯಾಂಕರ್ ಟ್ರಕ್‌- ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ. ತಮಿಳುನಾಡಿನ ತಿರುಪ್ಪುರ ಜಿಲ್ಲೆಯ ಧಾರಾಪುರಂ-ಪಳನಿ ರಸ್ತೆಯಲ್ಲಿ ಗುರುವಾರ ತಡರಾತ್ರಿ ಈ ಅವಘಡ ಸಂಭವಿಸಿದೆ.

ಮೃತರನ್ನು ತಮಿಳುಮಣಿ (51), ಚಿತ್ರಾ (49), ಸೆಲ್ವರಾಣಿ (70), ಬಾಲಕೃಷ್ಣನ್ (78), ಮತ್ತು ಕಲಾರಾಣಿ (50) ಎಂದು ಗುರುತಿಸಲಾಗಿದೆ. ಇವರೆಲ್ಲರೂ ದಿಂಡಿಗಲ್ ಜಿಲ್ಲೆಯ ಪಳನಿಯಲ್ಲಿ ನಡೆದ ಮದುವೆ ಕಾರ್ಯಕ್ರಮ ಮುಗಿಸಿ ವಾಪಸ್‌ ಆಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳುಮಣಿ ಕಾರು ಚಲಾಯಿಸುತ್ತಿದ್ದರು. ಧಾರಾಪುರಂ-ಪಳನಿ ರಸ್ತೆಯ ಮಣಕ್ಕಡವು-ಆಲಂಕಾಡು ಬಸ್ ನಿಲ್ದಾಣದ ಬಳಿ ಬಂದಾಗ ವಾಹನ ನಿಯಂತ್ರಣ ತಪ್ಪಿದೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ತಮಿಳುಮಣಿ, ‌ಚಿತ್ರಾ, ಬಾಲಕೃಷ್ಣನ್ ಮತ್ತು ಸೆಲ್ವರಾಣಿ ಸ್ಥಳದಲ್ಲೇ ಮೃತಪಟ್ಟರೆ, ಕಲಾರಾಣಿ ಅವರನ್ನು ಧಾರಾಪುರಂ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನೆ ಸಂಬಂಧ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರು. ಪರಿಹಾರ ಘೋಷಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT